ಶ್ರೀ ಸಿದ್ದೇಶ್ವರ ದನಗಳ ಜಾತ್ರೆಯನ್ನು ವ್ಯವಸ್ಥಿತವಾಗಿ ಆಯೋಜಿಸಿ- ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ

ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಜಯಪುರದಲ್ಲಿ ಸಚಿವ ಶಿವಾನಂದ ಎಸ್. ಪಾಟೀಲ ಶ್ರೀ ಸಿದ್ದೇಶ್ವರ ದನಗಳ ಜಾತ್ರೆ ಕುರಿತು ಸಭೆ ನಡೆಸಿದರು

ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟç ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ,  ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ  ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು  ಯಾವುದೇ ಅಡೆ-ತಡೆವಾಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.

ಜಾತ್ರೆಯಲ್ಲಿ  ಅಂದಾಜು 50 ರಿಂದ 60 ಸಾವಿರ ಜಾನುವಾರುಗಳಿಗೆ ಬರುವ ಸಾಧ್ಯತೆ ಇರುವುದರಿಮದ ಜಾನುವಾರುಗಳಿಗೆ ರೋಗ ನಿರೋಧ ಲಸಿಕೆ ನೀಡಲು, ಸುಮಾರು 50 ಜನ ಪಶುವೈದ್ಯಕೀಯ ಪದವೀಧರರನ್ನು ಆಹ್ವಾನಿಸಿ ಅವರಿಂದ ಜಾನುವಾರುಗಳಿಗೆ ವ್ಯವಸ್ಥಿತವಾಗಿ ಕಟ್ಟಲು ಹಾಗೂ ಹೊಸ ಹೊಸ ತಳಿಯ ಜಾನುವಾರುಗಳ ಪ್ರದರ್ಶನ ಹಾಗೂ ಜಾತ್ರೆಯಲ್ಲಿ ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಆಯೋಜನೆಗೆ ಅವರು  ಸೂಚಿಸಿದರು.

ಒಂದು ವಾರಕ್ಕೂ ಹೆಚ್ಚಿನ ಕಾಲ ಜಾತ್ರೆ ನಡೆಯುವುದರಿಂದ ಚಳಿಗಾಲವಿರುವುದರಿಂದ ಜಾನುವಾರುಗಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ, ಔಷದಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಸೂಕ್ತ ವೈದ್ಯೋಪಚಾರಕ್ಕೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ, 3 ತಂಡಗಳನ್ನು ರಚಿಸಿ ವೈದ್ಯಕೀಯ ಸೇವೆ ಒದಗಿಸಬೇಕು. ಅತಿ ಹೆಚ್ಚು ಜನರು ಭಾಗವಹಿಸುವುದರಿಂದ ಸಾರ್ವಜನಿಕರು, ರೈತರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಕೇಂದ್ರ, ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳಿಗೆ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಔಷಧಿ ಸಿಂಪರಣೆ (ಫಾಗಿಂಗ್) ಹಾಗೂ ಜಾತ್ರೆಯಲ್ಲಿ ದಿನನಿತ್ಯ ಶೇಖರಣೆಯಾಗುವ ಕಸವನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡುವುದು ಸೇರಿದಂತೆ   ಮಹಾನಗರ ಪಾಲಿಕೆಯಿಂದ ಪಬ್ಲಿಕ್ ಮೊಬೈಲ್ ಶೌಚಾಲಯ ವ್ಯವಸ್ಥೆ, ಹೆಸ್ಕಾಂದಿAದ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ಜಾನುವಾರು ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಕೇಂದ್ರ ಬಸ್ ನಿಲ್ದಾಣದಿಂದ ಸೂಕ್ತ ಸಾರಿಗೆ ವ್ಯವಸ್ಥೆ, ಮುಖ್ಯ ರಸ್ತೆಯಿಂದ ಜಾನುವಾರು ಜಾತ್ರೆ ಸ್ಥಳಕ್ಕೆ ಹೋಗುವ ರಸ್ತೆಯನ್ನು ಸುಗಮಗೊಳಿಸಿ, ಜಾತ್ರೆ ಹೋಗುವ ರೈತರಿಗೆ ಅನುಕೂಲ ಕಲ್ಪಿಸುವುದು,  ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ ನಿಲುಗಡೆ, ಪೋಲಿಸ್ ಬಂದೋಬಸ್ತ,  ಹಾಗೂ ಪ್ರತಿ ದಿನ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿ ಕಾರ್ಯಕ್ರಮಗಳ ಆಯೋಜನೆ ಹಾಗೂ ಜಾನುವಾರುಗಳ ಮಾರಾಟದ ನಂತರ ರಸೀದಿ ನೀಡುವ ಸಂದರ್ಭದಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವವರು ಹಾಗೂ ಕೊಳ್ಳುವವರ ಹೆಸರು, ವಿಳಾಸ,  ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ ಪಡೆದುಕೊಳ್ಳುವಂತೆ ಮತ್ತು  ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ಋಷಿಕೇಶ ಸೊನಾವಣೆ ಭಗವಾನ, ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ ಕವಿತಾ ಆರ್., ಎಪಿಎಂಸಿ ಕಾರ್ಯದರ್ಶಿ ಎಂ. ವಿ. ಶೈಲಜಾ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಘೊಣಸಗಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌