ಶ್ರೀ ಗೋಪಾಲ ನಂದುಲಾಲ ಮಹಾರಾಜರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ-ಸಂತಸ ವ್ಯಕ್ತಪಡಿಸಿದ ಮಹಾರಾಜರು

ವಿಜಯಪುರ: ಅಯೋಧ್ಯೆಯಲ್ಲಿ ಜನೇವರಿ 22 ರಂದು ನಡೆಯಲಿರುವ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಮಹಾರಾಜರು, ತಮಗೆ ಆಹ್ವಾನ ನೀಡಿರುವುದು ಬಂಜಾರಾ ಸಮಾಜಕ್ಕೂ ಪ್ರಾತಿನಿಧ್ಯ ನೀಡಿದಂತಾಗಿದ್ದು, ಇದು ಖುಷಿಯ ಸಂಗತಿಯಾಗಿದೆ.  ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ಶ್ರೀ ಗೋಪಾಲ ನಂದೂಲಾಲ ಮಹಾರಾಜರಿಗೆ ನೀಡಲಾಗಿರವ ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆ ಆಮಂತ್ರಣ ಪತ್ರಿಕೆ

ವಿಜಯಪುರ ಜಿಲ್ಲೆಯ ತೊರವಿಎಲ್. ಟಿ- 1ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ.  ಸಂತ ಸೇವಾಲಾಲ ಮಹಾರಾಜರ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಆಶೀರ್ವಾದ ಇದಕ್ಕೆ ಕಾರಣ ಎನ್ನಲು ಹೆಮ್ಮೆ ಎನಿಸುತ್ತಿದೆ.  ಶ್ರೀ ರಾಮನ ದರ್ಶನಕ್ಕೆ ನಾನೂ ಕಾತುರನಾಗಿದ್ದೇನೆ.  ಎಲ್ಲ ರಾಮ ಭಕ್ತರಿಗೆರಿಗೆ ಮನಃಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ ಎಂದು ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌