2024 ಮತ್ತೊಮ್ಮೆ ಮೋದಿ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗೋಡೆ ಬರಹಕ್ಕೆ ಚಾಲನೆ

ವಿಜಯಪುರ: 2024 ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದೇಶ ಇನ್ನಷ್ಟೂ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕು.  ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪ ಹೊಂದಿ ವಿಶ್ರಾಂತಿಯನ್ನು ಪಡೆಯದೇ ಸತತ ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಅಗತ್ಯವಾಗಿದೆ.  ಪ್ರಧಾನಿಯವರ ಪ್ರಾಮಾಣಿಕ, ಜನಪರ ಹಾಗೂ ಪರಿಶುದ್ಧ ಆಡಳಿತ ಪ್ರತಿಯೊಬ್ಬ ಭಾರತೀಯರ ಮನಗೆದ್ದಿದೆ,  ವಿದೇಶಿಗಳು ಸಹ ಮೋದಿಜಿ ನಾಯಕತ್ವಕ್ಕೆ ಮನಸೋತಿವೆ ಎಂದು ಹೇಳಿದರು.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಭವ್ಯ ರಾಮಮಂದಿರ ನಿರ್ಮಾಣ, ಕಪ್ಪು ಹಣದ ವಿರುದ್ದ ಸಮರ, ಉಜ್ವಲ ಯೋಜನೆ ಮೂಲಕ ಮನೆ ಮನೆಗೆ ಅಡುಗೆ ಅನೀಲ, ಫಸಲ್ ಬಿಮಾ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಹೀಗೆ ಮೋದಿಜಿ ಅವರು ರೂಪಿಸಿದ ಜನಪರ, ರೈತಪರ ಕಾರ್ಯಕ್ರಮಗಳ ಪಟ್ಟಿ ದೊಡ್ಡದಿದೆ.  ಆರ್ಥಿಕತೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದೇ ರೀತಿಯ ಪ್ರಗತಿಯ ಪರಂಪರೆ ಮುಂದುವರೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಿದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಬಿಜೆಪಿ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಶಿಂದೆ, ಅಶೋಕ ರಾಥೋಡ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರ ಪ್ರತಿನಿಧಿ ಮಹೇಶ ಒಡೆಯರ, ಕಾರ್ಯದರ್ಶಿ ಶರಣಬಸವ ಕುಂಬಾರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜ್ಜರಗಿ, ರಾಘವೇಂದ್ರ ಕಾಫ್ಸೆ ಸಿದ್ದರಾಮ ಆನಗೊಂಡ, ಯುವ ಮೋರ್ಚಾ ಪದಾಧಿಕಾರಿಗಳಾದ ಅನಿಲ ಉಪ್ಪಾರ, ಪ್ರವೀಣ್ ಕೋಡಗಿ, ದಶರಥ ಕಾಂಬಳೆ, ಆನಂದ ಮುಚ್ಚಂಡಿ, ವಿಕಾಸ ಕಿಟ್ಟಾ, ನಿಖಿಲ ಬಾಗೇವಾಡಿ, ಸ್ವರೂಪ ಸಪ್ತಾಳೆ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌