ತುಷಾರ ಚಲನಚಿತ್ರಕ್ಕೆ ಸಿದ್ಧನಕೊಳ್ಳದಲ್ಲಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಿದ್ದನಕೊಳ್ಳದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ನಡೆದ 2024 ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಟಿ. ಮಲಗೊಂಡ ನಟಿಸಿರುವ ತುಷಾರ ಚಲನಚಿತ್ರಕ್ಕೆ ಹಿರಿಯ ನಿರ್ದೇಶಕರು, ಕಲಾವಿದರು ಮತ್ತು ಆಯ್ಕೆದಾರರ ಸಮಿತಿ ಮೆಚ್ಚುಗೆ ಪ್ರಶಸ್ತಿ ಲಭಿಸಿದೆ.

ರಾಜ್ಯದ ನಾನಾ ಗಡೆಗಳಿಂದ ನೂರಾರು ಚಲನಚಿತ್ರಗಳು ಆಯ್ಕೆಗೆ ಅರ್ಜಿ ಸಲ್ಲಿಸಿದ್ದವು.  ಈ ವೇಳೆ ಮಲಗೊಂಡ ಫಿಲಂ ಪ್ರೊಡಕ್ಷನ್ ನಡಿ ತಯಾರಾದ ತುಷಾರ್ ವನ್ನೂ ಕಳುಹಿಸಲಾಗಿತ್ತು.  ಈ ಸಿನೇಮಾ ವೀಕ್ಷಿಸಿದ ಹಿರಿಯ ನಿರ್ದೇಶಕರು,ಕಲಾವಿದರು, ಆಯ್ಕೆ ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿ ವಿಶ್ವಪ್ರಕಾಶ ಟಿ. ಮಲಗೊಂಡ ಅವರಿಗೆ  ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಿತು.

ಈ ಸಂದರ್ಭದಲ್ಲಿ ಶ್ರೀ ಸಿದ್ದನಕೊಳ್ಳ ಮಠದ  ಡಾ. ಶಿವಕುಮಾರ ಸ್ವಾಮೀಜಿ, 750 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ ಖಳನಾಯಕ ಚಿತ್ರನಟ ಶೋಭರಾಜ, ಕೆಜಿಎಫ್ ಸಿನಿಮಾ ಖ್ಯಾತಿಯ ಸಾಹಿತ್ಯಗಾರ ಮತ್ತು ಚಿತ್ರನಿರ್ದೇಶಕ ಕಿನ್ನಾಳ ರಾಜ್, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಕೆಪಿಸಿಸಿ ಸದಸ್ಯೆ ರಕ್ಷಿತಾ ಇಟಿ, ಗೋವಾದ ಉದ್ಯಮಿ ಮತ್ತು ಕಾಂಗ್ರೆಸ್ ಮುಖಂಡ ಸಿದ್ದಣ್ಣ ಮೇಟಿ, ನಟ, ನಿರ್ದೇಶಕ, ನಿರ್ಮಾಪಕ ಡಾ. ಪ್ರಭು ಗಂಜಿಹಾಳ, ಕಿರುತೆರೆ ದಾರಾವಾಹಿ ನಟ, ನಟಿಯರು, ಸಿನಿಮಾ ನಿರ್ದೇಶಕರು, ಕಲಾವಿದರು ಸೇರಿದಂತೆ ಹಿರಿ, ಕಿರಿತೆರೆ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌