ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನಲ್ಲಿ ರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ, ನೂರಾರು ವರ್ಷಗಳ ಹಿಂದೆ ಆಗಬೇಕಾಗಿದ್ದ ಶ್ರೀರಾಮ ಮಂದಿರವನ್ನು ಈಗ ಪೂರ್ಣಗೊಳಿಸಿ ಉದ್ಗಾಟಿಸಿರುವುದು ಸಂತಸ ತಂದಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಸೌಭಾಗ್ಯ ಎಸ್. ಭೋಗಶೆಟ್ಟಿ, ನಿರ್ದೇಶಕರಾದ ಶಾಂತಪ್ಪ ಎಸ್. ಜತ್ತಿ,  ಪ್ರಕಾಶ ಬಗಲಿ, ಗುರುರಾಜ ಗಂಗನಳ್ಳಿ, ಈರಣ್ಣ ಪಟ್ಟಣಶೆಟ್ಟಿ, ಡಾ. […]

ಬಬಲೇಶ್ವರ ಮತಕ್ಷೇತ್ರಾದ್ಯಂತ ನಾನಾ ದೇವಸ್ಥಾನಗಳಲ್ಲಿ ಎಂಬಿಪಿ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ರಾಮ- ಹನುಮಂತದೇವರ ಗುಡಿಗಳು ಹಾಗೂ ಗ್ರಾಮದೇವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ- ಪ್ರಾರ್ಥನೆ ನೆರವೇರಿಸಲಾಯಿತು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತುಅದೇ ರೀತಿ ಶ್ರೀ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದವರು ಕೂಡಾ ಬಬಲೇಶ್ವರ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ರಾಮ, ಹನುಮಂತ ಮತ್ತು […]

ದುಬೈನಲ್ಲಿ ಜೈ ಶ್ರೀರಾಮ ಎಂದು ಸಂಭ್ರಮಿಸಿದ ಬಸವನಾಡಿನ ಪ್ರವಾಸಿಗರು

ವಿಜಯಪುರ: ಈಗ ದೇಶಾದ್ಯಂತ ಶ್ರೀರಾಮ ಮಂದಿರದಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಸಂಚಲನ ಸೃಷ್ಠಿಸಿದೆ.  ಎಲ್ಲೆಡೆ ಜೈ ಶ್ರೀರಾಮ ಘೋಷಣೆಗಳು ಮೊಳಗುತ್ತಿದ್ದರೆ, ಎಲ್ಲ ಕಡೆ ರಾಮಭಕ್ತರು ನಾನಾ ರೀತಿಯಲ್ಲಿ ಸಾಂಸ್ಕೃತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಇದೇ ರೀತಿ, ದುಬೈ ಪ್ರವಾಸದಲ್ಲಿರುವ ಬಸವನಾಡು ವಿಜಯಪುರ ಜಿಲ್ಲೆಯ ಹಲವಾರು ಜನರು ತಾವೀಗ ಪ್ರವಾಸ ಕೈಗೊಂಡಿರುವ  ಸ್ಖಳದಲ್ಲಿಯೇ ಕೈಯ್ಯಲ್ಲಿ ಭಗವಾ ಧ್ವಜ ಹಿಡಿದು ರಾಮ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.  ವಿಜಯಪುರ […]

ವಿಜಯಪುರ ಆದರ್ಶ ನಗರದ ಮಾರುತಿ ಮಂದಿರದಲ್ಲಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರದ ಆದರ್ಶ ನಗರದ ಶ್ರೀ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು. ದೇವಸ್ಥಾನದಲ್ಲಿ ಸೇರಿದ ಬಡಾವಣೆಯ ನಿವಾಸಿಗಳು ಶ್ರೀರಾಮಚಂದ್ರನ ಬೃಹತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಮನಾಮ ಜಪಿಸಿದರು.  ಅಲ್ಲದೇ, ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.  ಅಲ್ಲದೇ, ಪ್ರಸಾದ ಹಂಚಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಶ್ರೀ ಹನುಮಾನ ದೇವಸ್ಥಾನ ಅಧ್ಶಕ್ಷ […]