ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನಲ್ಲಿ ರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ, ನೂರಾರು ವರ್ಷಗಳ ಹಿಂದೆ ಆಗಬೇಕಾಗಿದ್ದ ಶ್ರೀರಾಮ ಮಂದಿರವನ್ನು ಈಗ ಪೂರ್ಣಗೊಳಿಸಿ ಉದ್ಗಾಟಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.

ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಸೌಭಾಗ್ಯ ಎಸ್. ಭೋಗಶೆಟ್ಟಿ, ನಿರ್ದೇಶಕರಾದ ಶಾಂತಪ್ಪ ಎಸ್. ಜತ್ತಿ,  ಪ್ರಕಾಶ ಬಗಲಿ, ಗುರುರಾಜ ಗಂಗನಳ್ಳಿ, ಈರಣ್ಣ ಪಟ್ಟಣಶೆಟ್ಟಿ, ಡಾ. ಸಂಜೀವ ಪಾಟೀಲ(ಮುಳವಾಡ ), ಬೋರಮ್ಮ ಬಿ. ಗೊಬ್ಬೂರ, ಸಂಗನಗೌಡ ಪಾಟೀಲ(ತೊನಶ್ಯಾಳ), ವ್ಯವಸ್ಥಾಪಕ ಎಸ್. ಎಲ್. ಇಂಡಿ ಹಾಗೂ ಬ್ಯಾಂಕಿನ ಸಲಹೆಗಾರ ಎಸ್. ಕೆ. ಲೋಣಿ ಮತ್ತು  ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌