ಗಣರಾಜ್ಯೋತ್ಸವ: ಬಸವ ನಾಡಿನಲ್ಲಿ ಸಚಿವ ಎಂ. ಬಿ. ಪಾಟೀಲ ಧ್ವಜಾರೋಗಣ

ವಿಜಯಪುರ: ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಧ್ವಜಾರೋಹಣ ನೆರವೇರಿಸಿದರು.

ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರಯ ನಂತರ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು‌ ಅಲ್ಲದೇ, ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.

 

ವಿಜಯಪುರದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು

 

ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಶಿ ಆನಂದ, ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

ಈ‌ ಸಂದರ್ಭದಲ್ಲಿ ಸ್ವಾರಂತ್ರ್ಯ ಹೋರಾಟಗಾರರು ಮತ್ತು ನಾನಾ ಕ್ಷೇತ್ರಗಳ ಸಾಧಕರು ಹಾಗೂ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಸಚಿವರು ಮತ್ತು ಗಣ್ಯರು ಸನ್ಮಾನಿಸಿ ಗೌರವಿಸಿದರು.

Leave a Reply

ಹೊಸ ಪೋಸ್ಟ್‌