ವಿಜಯಪುರ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ- ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದುö, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ. ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದುö, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದುö, ಸಂಘದ ಸದಸ್ಯರು ಹಾಗೂ ಪದಾಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ. […]

ಬಸವ ನಾಡಿನಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ- ವಚನಗಳ ಮೂಲಕ ಸಮ ಸಮಾಜಕ್ಕೆ ಶರಣರು ಶ್ರಮಿಸಿದ್ದಾರೆ- ಮಹಾದೇವ ಮುರಗಿ

ವಿಜಯಪುರ: ಕಲ್ಯಾಣ ಕರ್ನಾಟಕದ ಬಸವ ಕಲ್ಯಾಣದ ಅನುಭವ ಮಂಟಪದ 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ ಮಡಿವಾಳ ಮಾಚಿದೇವ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವರ ಮುರಗಿ ಹೇಳಿದರು. ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶರಣರ ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ […]