ವಿಜಯಪುರ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ- ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದುö, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.

ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದುö, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದುö, ಸಂಘದ ಸದಸ್ಯರು ಹಾಗೂ ಪದಾಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ.

ಕಳೆದ ವರ್ಷ ಫೆ. 4 ಮತ್ತು 5 ರಂದು ವಿಜಯಪುರ ಜಿಲ್ಲಾ ಘಟಕ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿತ್ತುö. ಈ ಸಮ್ಮೇಳನ ಯಶಸ್ಸಿಗೆ ಸಂಘದ ಸದಸ್ಯರು ಹಾಗೂ ಹಾಗೂ ಹಿತೈಷಿಗಳು ದಣಿವರಿಯದೇ ದುಡಿದಿದ್ದನ್ನು ಇಲ್ಲಿ ಸ್ಮರಿಸಬಹುದು.

ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕಕ್ಕೆ ಕೆಯುಡಬ್ಲೂ÷್ಯಜೆ ವಾರ್ಷಿಕ ಪ್ರಶಸ್ತಿ ನೀಡಿ ರಾಜ್ಯ ಘಟಕ ಗೌರವಿಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಸದಸ್ಯರ ಸಂಭ್ರಮ : ಜಿಲ್ಲಾ ಸಂಘ ರಾಜ್ಯ ಘಟಕದ ಪ್ರಶಸ್ತಿಗೆ ಪುರಸ್ಕೃತವಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಘದ ಸದಸ್ಯರು, ಪದಾಕಾರಿಗಳು ಹಾಗೂ ಹಿತೈಷಿಗಳು ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡರು. ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

ಹೊಸ ಪೋಸ್ಟ್‌