ಬಸವ ನಾಡಿನಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ- ವಚನಗಳ ಮೂಲಕ ಸಮ ಸಮಾಜಕ್ಕೆ ಶರಣರು ಶ್ರಮಿಸಿದ್ದಾರೆ- ಮಹಾದೇವ ಮುರಗಿ

ವಿಜಯಪುರ: ಕಲ್ಯಾಣ ಕರ್ನಾಟಕದ ಬಸವ ಕಲ್ಯಾಣದ ಅನುಭವ ಮಂಟಪದ 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ ಮಡಿವಾಳ ಮಾಚಿದೇವ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವರ ಮುರಗಿ ಹೇಳಿದರು.

ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶರಣರ ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ ಎಂದೆAದಿಗೂ ಪ್ರಸ್ತುತವಾಗಿವೆ. ಅಂದಿನ ಬಸವಾದಿ ಶರಣರು ಕಾಯಕ ತತ್ವವನ್ನು ಅನುಸರಿಸಬೇಕು ಹಾಗೂ  ಅವರ ಜೀವನ ಆದರ್ಶಗಳನ್ನು  ಅಳವಡಿಕೊಳ್ಳಬೇಕು ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು

ಅಪರ ಪೊಲೀಸ್ ವರಿಷ್ಟಾಧಿಕಾರಿಗಳಾದ ರಾಮನಗೌಡ ಹಟ್ಟಿ ಮಾತನಾಡಿ ಶರಣರು 12 ನೇ ಶತಮಾನದಲ್ಲಿ ಸುಮರು 770 ಶಿವಶರಣರು ಒಂದೆಡೆ ಸೇರಿ ಅನುಭವ ಮಂಟಪದಲ್ಲಿ  ಸಾಮಾಜಿಕ ಪರಿವರ್ತನೆಗಾಗಿ ಏಕತೆಗಾಗಿ ಚಿಂತನ-ಮಂಥನ ಹಾಗೂ ಗೋಷ್ಠಿಗಳನ್ನು ನಡೆಸುತ್ತಿದ್ದರು.  ಅಂದಿನ ವಚನಗಳು ಇಂದು  ನಮ್ಮ ಜೀವನೋಪಾಯ ನಡೆಸಲು ಒಂದು ದಾರಿಯಾಗಿವೆ ಶಿವಶರಣರ ವಚನಗಳು ಸಮಾಜಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಲ್ಲದೆ  ವಚನಗಳಿಂದ ನಾವುಗಳೂ ಕಲಿಯಬೇಕಾದದ್ದು ಬಹಳಷ್ಟಿದೆ ನಾವು ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ನಾವೆಲ್ಲರೂ ಒಂದೆ ಎನ್ನುವ ಭಾವನೆ ನಮ್ಮಲ್ಲಿರಬೇಕು ಅದರೊಂದಿಗೆ ಎಲ್ಲ ಸಮಾಜವನ್ನು ಪ್ರಿತಿಯಿಂದ, ಗೌರವದಿಂದ ಕಾಣಬೇಕು ಎಂದು ಅವರು ಹೇಳಿದರು.

ಉಪನ್ಯಾಸಕರಾದ ಮಂಜುನಾಥ ಜನಗೊಂಡ ಮಡಿವಾಳ ಮಾಚಿದೇವ ಶರಣರ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು ಜಯಂತಿಗಳು ಅದ್ದೂರಿಯಾಗಿ ಆಚರಿಸಬೇಕು ಕೇವಲ ಒಂದೇ ಸಮಾಜಕ್ಕೆ ಸೀಮಿತವಾಗದೆ ಎಲ್ಲ ಸಮಾಜ ಬಾಂಧವರನ್ನು ಜಯಂತಿಯAದು ಕರೆ ತರಬೇಕು ನಾವೆಲ್ಲರೂ ಒಂದೇ ಎಂಬ ಭಾವನ ನಮ್ಮಲ್ಲಿ ಬರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹೊಂಗಯ್ಯ, ಜಿ. ಪಂ. ಯೋಜನಾಧಿಕಾರಿ ಎ. ಬಿ. ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಅಯ್ಯುಬ್ ದ್ರಾಕ್ಷಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ ಸಾಯಬಣ್ಣ ಮಡಿವಾಳರ, ಸಮಾಜದ ಮುಖಂಡರುಗಳಾದ ಬಾಬು ಬಳ್ಳಾರಿ, ಮುತ್ತಪ್ಪ ಮಡಿವಾಳರ, ಪ್ರಭು ಮಡಿವಾಳರ, ಶಿವಪ್ಪ ಹುಬ್ಬಳ್ಳಿ, ಶ್ರೀಶೈಲ ಅಗಸರ, ಮಲಕಪ್ಪ ಹುಬ್ಬಳ್ಳಿ, ಸಂತೋಷ ಬಾಗಲಕೋಟ, ವಿದ್ಯಾವತಿ ಅಂಕಲಗಿ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಗಿರೀಶ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು. ಸುಭಾಸ ಕಲ್ಲೂರ ನಿರೂಪಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊAಡ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು.

Leave a Reply

ಹೊಸ ಪೋಸ್ಟ್‌