ಸಂಪೂರ್ಣ ಗುಣಮುಖನಾಗಿದ್ದೇನೆ- ವಿಕ್ಷಿಪ್ತ ಮನಸುಗಳ ಅಪಪ್ರಚಾರ ನೋವು ತಂದಿದೆ- ರಮೇಶ ಜಿಗಜಿಣಗಿ

ವಿಜಯಪುರ: ನಾನು ಈಗ ಸಂಪೂರ್ಣ ಆರೋಗ್ಯವಾಗಿದ್ದು, ಕೆಲವು ವಿಕ್ಷಿಪ್ತ ಮನಸ್ಸುಗಳು ನನ್ನ ಆರೋಗ್ಯದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ನೋವುಂಟು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಹಜವಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದೆ.  ಆದರೆ ಕೆಲವೊಂದು ವಿಕ್ಷಿಪ್ತ ಮನಸ್ಸುಗಳು ತಮ್ಮ ಸ್ವಾರ್ಥ ರಾಜಕಾರಣದ ಬೆಳೆ ಬೇಯಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ಮಾಡುತ್ತಿರುವುದು ನನ್ನ ಮನಸ್ಸಿಗೆ ನೋವು ಉಂಟು ಮಾಡಿದೆ ಎಂದು ತಿಳಿಸಿದ್ದಾರೆ. ನನ್ನ […]

ಬಿಜೆಪಿಗೆ ಆಪರೇಶನ್ ಕಮಲ, ದುಡ್ಡು ಕೊಟ್ಟು ಕೊಂಡುಕೊಳ್ಳುವುದೇ ಕೆಲಸವಾಗಿದೆ- ಸಿಎಂ ಎಸ್ ಸಿದ್ಧರಾಮಯ್ಯ ವಾಗ್ದಾಳಿ

ವಿಜಯಪುರ: ಬಿಜೆಪಿಯವರಿಗೆ ಆಪರೇಶನ್ ಬಿಟ್ಟರೆ ಬೇರೇನೂ ಗೊತ್ಲಿಲ.  ದುಡ್ಡ ಕೊಟ್ಟು ಕೊಂಡು ಕೊಳ್ಳೊದೇ ಅವರ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳೆಗ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜಗದೀಶ ಶೆಟ್ಟರ ಅವರ ರೀತಿ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೀಡಿರುವ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, […]

ವಿಜಯಪುರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ

ವಿಜಯಪುರ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಇಲ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ, ಸರಕಾರಿ ಪಾಲಿಟೆಕ್ನಿಕ್, ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.  ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಆರ್. ಸಿ. ಎಚ್. ಅಧಿಕಾರಿ ಡಾ. ಕೆ. ಡಿ.  ಗುಂಡಬಾವಾಡಿ ಉದ್ಘಾಟಿಸಿದರು. […]