ಸಂಸದ ಡಿ. ಕೆ. ಸುರೇಶ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ಬೆಂಗಳೂರು ಗ್ರಾಮೀಣ ಸಂಸದ ಡಿ. ಕೆ. ಸುರೇಶ ನೀಡಿರುವ ಭಾರತ ವಿಭಜನೆ ಹೇಳಿಕೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಭೋಧಿಸಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.  

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚೋ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ ರಾಠೋಡ, ಕಾಂತು ಶಿಂದೆ, ಮಲ್ಲಮ್ಮ ಜೋಗೂರ, ಶ್ರೀಧರ ಬಿಜ್ಜರಗಿ, ವಿಠ್ಠಲ ನಡುವಿನಕೇರಿ, ಸುಶ್ಮಿತಾ ವಾಂಡ್ಕರ, ರಾಹುಲ ಔರಂಗಾಬಾದ, ರವಿ ಚವ್ಹಾಣ, ಅನಿಲ ಉಪ್ಪಾರ, ಪ್ರವೀಣ ಕೂಡಗಿ, ರಾಮಚಂದ್ರ ಚವ್ವಾಣ, ರಾಜಕುಮಾರ ಗೌಂಡಿ, ಅರವಿಂದ ಹಡಗಲಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌