ಮರಗೂರ ಸಕ್ಕರೆ ಕಾರ್ಖಾನೆ ಚುನಾವಣೆ- ಶಾಸಕ ಯಶವಂತರಾಯಗೌಡ ವಿ. ಪಾಟೀಲ ಬಣಕ್ಕೆ ಭರ್ಜರಿ ಗೆಲುವು

ವಿಜಯಪುರ: ಇಂಡಿ ತಾಲೂಕಿನ ಮರಗೂರ ಶ್ರೀ ಭೀಮಾಶಂಕರ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮತ್ತು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಬಣಕ್ಕೆ ಭರ್ಜರಿ ಗೆಲುವು ಸಾಧಿಸಿದೆ.  ಶಾಸಕರ ಬಣದಿಂದ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಾರ್ಖಾನೆಯ ಮೇಲೆ ಮತ್ತೆ ಹಿಡಿತ ಸಾಧಿಸಿದ್ದಾರೆ.  ಒಟ್ಟು 13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈಗಾಗಲೇ ಐದು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫಲಿತಾಂಶದ ವಿವರ ಸಾಮಾನ್ಯ ಕ್ಷೇತ್ರ(5 ಸ್ಥಾನಗಳು) ಯಶವಂತ್ರಾಯಗೌಡ ಪಾಟೀಲ- […]

ಸಿಂದಗಿ ಪೊಲೀಸರ ಕಾರ್ಯಾಚರಣೆ- 4 ಜನರ ಬಂಧನ, 37 ಬೈಕ್ ವಶ- ಬ್ಯಾಂಕ್, ಫೈನಾನ್ಸ್ ಕಳ್ಳತನದಲ್ಲಿ 3 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಜನ ಬೈಕ್ ಕಳ್ಳರು ಮತ್ತು ಮೂರು ಜನ ಬ್ಯಾಂಕ್ ಹಾಗೂ ಫೈನಾನ್ಸ್ ಕಳ್ಳರನ್ನು ಬಂಧಿಸಿದ್ದಾರೆ. ರೂ. 16.65 ಲಕ್ಷ ಮೌಲ್ಯದ 37 ಬೈಕ್ ವಶ ಮೊದಲ ಪ್ರಕರಣದಲ್ಲಿ ಸಿಂದಗಿ ಪೊಲೀಸರು ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿದ್ದು, ಅವರ ಬಳಿಯಿದ್ದ 37 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.  ಇವುಗಳ ಒಟ್ಟು ಮೌಲ್ಯ ರೂ. 16.65 ಲಕ್ಷ ಎಂದು ಅಂದಾಜಿಸಲಾಗಿದೆ. ಸಿಂದಗಿ ನಗರ ಮತು […]