ಫೆ. 14 ರಂದು ಚಡಚಣದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ. 14 ರಂದು ಚಡಚಣ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಮೊ:9364062528), ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ (ಮೊ:9364062557), ಪೊಲೀಸ್ ಇನ್ ಸ್ಪೆಕ್ಟರ್-1 (ಮೊ:9364062640), ಪೊಲೀಸ್ ಇನ್ಸ್‍ಪೆಕ್ಟರ್-2 (ಮೊ: 9364062639) ಇವರು ಅಂದು ಬೆಳಿಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಈ ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.  ಸರಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಮತ್ತು ಲಂಚದ ಬೇಡಿಕೆ ಸೇರಿದಂತೆ ಇತರೆ ತೊಂದರೆಗಳನ್ನು ನೀಡುತ್ತಿರುವ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.  ಸ್ಥಳದಲ್ಲಿ ಪರಿಹಾರ ಪಡೆಯಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು.

ಅಲ್ಲದೇ, ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂ: 08352-255333, 257786, 295074 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಲೋಕಾಯುಕ್ತ ಕಚೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Leave a Reply

ಹೊಸ ಪೋಸ್ಟ್‌