ಲಾರಿ ಟಾಯರ್ ನಲ್ಲಿ ಹೊತ್ತಿಕೊಂಡ ಬೆಂಕಿ- ಕ್ಷಣಾರ್ಧದಲ್ಲಿ ಇಡೀ ವಾಹನ ಸುಟ್ಟು ಭಸ್ಮ

ವಿಜಯಪುರ: ಚಲಿಸುತ್ತಿದ್ದ ಲಾರಿಯ ಟಾಯರ್ ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ವಾಹನವನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿ ನಡೆದಿದೆ.

ಸೋಲಾಪುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

ತಮಿಳುನಾಡಿಗೆ ಸೇರಿರುವ TN 29- CW 8877 ನಂಬರಿನ ಲಾರಿ ರಾಜಸ್ಥಾನದಿಂದ ಬೆಂಗಳೂರಿಗೆ ಗ್ರಾನೈಟ್ ಕಲ್ಲುಗಳನ್ನು ಸಾಗಿಸುತ್ತಿತ್ತು.  ತಡರಾತ್ರಿ ವೇಳೆ ಈ ಘಟನೆ ಸಂಭವಿಸಿದೆ.  ಬೆಂಕಿ ಇಡೀ ಲಾರಿಗೆ ವ್ಯಾಪಿಸುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಕೆಳಗೆ ಜಿಗಿದು ಪ್ರಾಣ ರಕ್ಷಿಸಿಸೊಂಡಿದ್ದಾರೆ.

ವಿಜಯಪುರ ಜಿಲ್ಲೆ ಹಳಗುಣಕಿ ಕ್ರಾಸ್ ಬಳಿ ಲಾರಿಗೆ ಹೊತ್ತಿರುವ ಬೆಂಕಿಯನ್ನು ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ

ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.  ಆದರೆ, ಅಷ್ಟರೊಳಗೆ ಲಾರಿ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಹೊರ್ತಿ ಪೊಲೀಸರು ಭೇಟಿ ನೀಡಿದ್ದು, ಪರಿಶೀನಲೆ ನಡೆಸುತ್ತಿದ್ದಾರೆ.  ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

ಹೊಸ ಪೋಸ್ಟ್‌