ಬಸವಾದಿ ಶರಣರ ವೇಷಭೂಷಣ ಧರಿಸಿ ಗಮನ ಸೆಳೆದ ಆಕ್ಸಫರ್ಡ್ ಶಾಲೆಯ ಮಕ್ಕಳು

ವಿಜಯಪುರ: ನಗರದ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಗಮನ ಸೆಳೆದಿದ್ದಾರೆ.

ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು.

ವಿಜಯಪುರ ಜಿ. ಪಂ. ನಲ್ಲಿ ಬಸವಾದಿ ಶರಣ ವೇಷಭೂಷಣ ಧರಿಸಿದ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಸಚಿವ ಎಂ. ಬಿ. ಪಾಟೀಲ ಅವರಿಗೆ ಬಸವೇಶ್ವರ ಭಾವಚಿತ್ರ ನೀಡಿ ಕೃತಜ್ಞತೆ ಸಲ್ಲಿಸಿದರು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಸವಾದಿ ಶರಣರ ವಚನಗಳ ಪುಸ್ತಕಗಳನ್ನ ನೀಡಿ ಮುಖ್ಯಮಂತ್ರಿಗಳಿಗೂ ಮತ್ತು ಸಚಿವ ಎಂ. ಬಿ. ಪಾಟೀಲ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.  ಮಕ್ಕಳನ್ನು ನೋಡಿ ಸಂತೋಷ ಪಟ್ಟ ಸಚಿವರು ಮಕ್ಕಳೊಂದಿಗೆ ನಿಂತು ಭಾವಚಿತ್ರ ತೆಗೆಸಿಕೊಂಡರು.  ಅಲ್ಲದೇ, ನಾಡಿನ ಮನೆ ಮನೆಗಳಲ್ಲಿ ಮತ್ತು ಮಕ್ಕಳ ಹೃದಯದಲ್ಲಿ ವಚನ ಸಾಹಿತ್ಯದ ಸಂಸ್ಕಾರ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಮುಖ್ಯ ಕಾರ್ಯ ನಿರ್ವಾಹನಾಧಿಕಾರಿ ರಿಷಿ ಆನಂದ, ಎಸ್ಪಿ ರಿಷಿಕೇಶ ಸೋನಾವಣೆ, ಶಾಸಕ ವಿಠ್ಠಲ ಕಟಕದೊಂಡ, ಮೇಯರ್ ಮೆಹಜಬೀನ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಡಾ. ಗಂಗಾಧರ ಸಂಬಣ್ಣಿ, ರಾಜಶೇಖರ ಕೌಲಗಿ, ಜಿ. ಎಂ. ಕಟ್ಟಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಬಸವಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌