ಫೆ.24ರಂದು ಇಂಡಿಯಲ್ಲಿ ಜಿಲ್ಲಾ ಗಾಣಿಗ ಸಮಾವೇಶ- ನೂತನ ಸಭಾಭವನ ಭೂಮಿಪೂಜೆ ಕಾರ್ಯಕ್ರಮ- ಎಂ. ಎಸ್. ಲೋಣಿ

ವಿಜಯಪುರ: ಫೆ. 24ರಂದು ಇಂಡಿಯಲ್ಲಿ ವಿಜಯಪುರ ಜಿಲ್ಲಾ‌ ಗಾಣಿಗ ಸಂಘದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಗಾಣಿಗರ ಸಂಘ ಮತ್ತು ಇಂಡಿ ತಾಲೂಕು‌ ಘಟಕದ ಸಂಯುಕ್ತಾಶ್ರಯದಲ್ಲಿ ಫೆ. 24ರಂದು ಬೆಳಿಗ್ಗೆ 10.30 ಕ್ಕೆ ಇಂಡಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿಯ ಗಾಣಿಗ ಸಮಾಜದ ಜಾಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.  ಈ ಸಂದರ್ಭದಲ್ಲಿ ಶತಮಾನದ ಸಂತ ಶ್ರೀ ಸಿದ್ದೇಶ್ವರ […]

ರಾಂಪುರದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ- ವಿದ್ಯೆ ಬೋಧಿಸಿದ ಗುರುಗಳನ್ನು ಮೆರವಣಿಗೆ ನಡೆಸಿದ ಶಿಷ್ಯಂದಿರು

ಬಾಗಲಕೋಟೆ: 20 ವರ್ಷಗಳ ಹಿಂದೆ ತಮಗೆ ವಿದ್ಯೆ ಬೋಧಿಸಿದ ಶಿಕ್ಷಕರನ್ನು ಮೆರವಣಿಗೆಯಲ್ಲಿ ಕರೆತಂದ ಶಿಷ್ಯಂದಿರು ಗುರುವಂದನೆ ಸಲ್ಲಿಸಿದ ಕಾರ್ಯಕ್ರಮ ಬಾಗಲಕೋಟೆ ತಾಲೂಕಿನ ರಾಂಪೂರದಲ್ಲಿರುವ ಸರಕಾರಿ ಪ್ರೌಢಶಾಲೆ ಸೀತಿಮನಿ ಆರ್. ಎಸ್. ಶಾಲೆಯಲ್ಲಿ ನಡೆಯಿತು.  ಈ ಶಾಲೆಯಲ್ಲಿ 2003-04ರಲ್ಲಿ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಅರ್ಥಪೂರ್ಣ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಕಾರ್ಯಕ್ರಮ ಪ್ರಾರಂಭಕ್ಕೂ ಮುಂಚೆ ಊರಿನ ಪ್ರಮುಖ ಬೀದಿಗಳಲ್ಲಿ ಶಿಕ್ಷಕರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು.  ಈ ಕಾರ್ಯಕ್ರಮದಲ್ಲಿ ಹಳೆ […]