ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳಕ್ಕೆ ಉಪಮೇಯರ ಚಾಲನೆ

ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಮಾರಾಟ ಮತ್ತು ವಸ್ತು ಪ್ರದರ್ಶನಕ್ಕೆ ಉಪಮೇಯರ್ ದಿನೇಶ ಹಳ್ಳಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ, ಸುಭಾಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಈ ಮೇಳವು ಫೆ. 21 ರಿಂದ 23ರ ವರೆಗೆ ಪ್ರತಿದಿನ ಬೆ. 10 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದೆ.  ಸಿದ್ಧ ಉಡುಪು, ಆಹಾರ ವಸ್ತುಗಳು, ಆಯುರ್ವೇದಿಕ ವಸ್ತುಗಳು, ಅಗರಬತ್ತಿ, ಆಟಿಕೆ ವಸ್ತುಗಳ ಮಾರಾಟ ಮೇಳ ಹಾಗೂ ವಸ್ತು ಪ್ರದರ್ಶನವನ್ನು ಇದಾಗಿದ್ದು, 30ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ.

Leave a Reply

ಹೊಸ ಪೋಸ್ಟ್‌