ಡಾ. ಪ್ರಭುಗೌಡ ಲಿಂಗದಳ್ಳಿ ಮಾನವೀಯತೆ- ಮಧ್ಯರಾತ್ರಿ ಬೈಕ್ ಜೊತೆ ರಸ್ತೆಬದಿ ಕಂದಕಕ್ಕೆ ಬಿದ್ದಿದ್ದ ಯುವಕನ ರಕ್ಷಿಸಿ ಚಿಕಿತ್ಸೆ

ವಿಜಯಪುರ: ಬೈಕ್ ಜೊತೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಖ್ಯಾತ ನೇತ್ರತಜ್ಞ ಮತ್ತು ಕಾಂಗ್ರೆಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ ರಕ್ಷಣೆ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ದೇವರ ಹಿಪ್ಪರಗಿ ಮತಕ್ಷೇತ್ರದ ನಾವದಗಿಯಲ್ಲಿ ಪ್ರವಚನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಡಾ. ಪ್ರಭುಗೌಡ ಲಿಂಗದಳ್ಳಿ ವಣಕ್ಯಾಳ ಗ್ರಾಮಕ್ಕೆ ನಾಟಕ ಉದ್ಘಾಟನೆಗೆ ತೆರಳುತ್ತಿದ್ದರು.  ಆಗ ಮಾರ್ಗ ಮಧ್ಯೆ ಬೆಕಿನಾಳ ಕ್ರಾಸ್ ಬಳಿ ಬೈಕ್ ಅಪಘಾತವಾಗಿ ಯುವಕನೋರ್ವ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಗಮನಿಸಿದರು.  ಕೂಡಲೇ ಕಾರು ನಿಲ್ಲಿಸಿ […]

ಲಿಂಬೆ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ರೂ. 7.50 ಕೋ. ಅನುದಾನ- ಯಶವಂತರಾಯಗೌಡ ವಿ. ಪಾಟೀಲ

ಬೆಂಗಳೂರು: ರಾಜ್ಯ ಸರಕಾರ ಮತ್ತು ತೋಟಗಾರಿಕೆ ಇಲಾಖೆ ಇಂಡಿಯಲ್ಲಿರುವ ಲಿಂಬೆ ಅಭಿವೃದ್ಧಿ ಮಂಡಳಿಗೆ ರೂ. 7.50 ಕೋ. ಅನುದಾನ ನೀಡಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ.  ಈಗಾಗಲೇ ರೂ. 30 ಲಕ್ಷ ಬಿಡುಗಡೆ ಮಾಡಲಾಗಿದೆ.  ಅಲ್ಲದೇ, […]

ಹೊರ್ತಿಯಲ್ಲಿ ಫೆ. 24 ರಂದು ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಫೆ. 24 ರಂದು ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ ತಿಳಿಸಿದ್ದಾರೆ. ಹೊರ್ತಿಯಲ್ಲಿ ಪೋಸ್ಟ್ ಆಫೀಸ್ ಹತ್ತಿರ ಹೊಸ ಕಾಂಪ್ಲೆಕ್ಸ್ ನಲ್ಲಿರುವ ಪಿಕೆಪಿಎಸ್ ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟಯೆ ವರೆಗೆ ಈ ಶಿಬಿರ ನಡೆಯಲಿದೆ. […]