ಭೂತ್ನಾಳ ಕೆರೆಗೆ ಸಚಿವ ಎಂ. ಬಿ. ಪಾಟೀಲ ಭೇಟಿ- ನೀರು ತುಂಬಿಸುವ ಯೋಜನೆ ಪರಿಶೀಲನೆ

ವಿಜಯಪುರ: ಈ ಬಾರಿ ಭೀಕರ ಬರಗಾಲವಿದೆ. ಮುಂಬರುವ ಬೇಸಿಗೆಯಲ್ಲಿ ಜನ ಜಾನುವಾರಗಳಿಗೆ ನೀರಿನ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ, ಅಧಿಕಾರಿಗಳು ಪೂರ್ವ ಯೋಜನೆಯೊದಿಗೆ ಕಾರ್ಯ ನಿರ್ವಹಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸಮಪರ್ಕವಾಗಿ ಕುಡಿಯುವ ನೀರು ಒದಗಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಭೂತನಾಳ ಕೆರೆಯನ್ನು ತಿಡಗುಂದಿ ಅಕ್ವಾಡೆಕ್ಟ್ ಮೂಲಕ ನೀರು ತುಂಬಿಸುವ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ […]

ಆಲಮೇಲ, ಸಿಂದಗಿ ತಾಲೂಕಿನ ನಾನಾ ಸ್ಥಳಗಳಿಗೆ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ, ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲನೆ

ವಿಜಯಪುರ: ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿಗೆ ಪ್ರಥಮಾಧ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆ.24ರಂದು ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಒದಗಿಸಲು ಕ್ರಮವಹಿಸಿಬೇಕು. ಯಾವುದೇ ರೀತಿಯ ಸಮಸ್ಯೆಯಾಗದಂತೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ […]