ನಾನಾ ಬೇಡಿಕೆ ಈಡೇರಿಸಲು ಆಗ್ರಹ: ಕೆ.ಎಸ್.ಆರ್.ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಯೂನಿಯನ್ ವತಿಯಿಂದ ಉಪವಾಸ ಸತ್ಯಾಗ್ರಹ

ವಿಜಯಪರ: ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮತ್ತು ಕೆ.ಎಸ್‌.ಆರ್‌.ಟಿ.ಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್(ಎಐಟಿಯುಸಿ) ವತಿಯಿಂದ ನಗರದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಐ. ಐ. ಮುಶ್ರೀಫ್, 31.12.2023ರ ಮೂಲ ವೇತನದ ಶೇ. 25ರಷ್ಟು ಹೆಚ್ಚಳ ಮಾಡಿ, 01.01.2024 ರಿಂದ ವೇತನ ಶ್ರೇಣಿಗಳನ್ನು ಸಿದ್ಧಪಡಿಸಬೇಕು.  ವೇತನ ಪರಿಷ್ಕರಣೆಯಲ್ಲಿ ಎಲ್ಲಾ ಹಂತಗಳಲ್ಲೂ ಮೂಲ ವೇತನದ […]

ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಮೂಲಕ ಅಮೃತ ಭಾರತ ಯೋಜನೆ ಮೂಲಕ ದೇಶದ ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿ, ರಸ್ತೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸಮರ್ಪಣೆ, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದು, ದೇಶದ ರೈಲು ನಿಲ್ದಾಣಗಳು ಸಾರ್ವಜನಿಕರಿಗೆ ಅತ್ಯಾಧುನಿಕ, ಸುಂದರ, ಸ್ವಚ್ಚ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಗಳನ್ನು ಒದಗಿಸಲಿವೆ ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ.   ನಗರದ ರೈಲ್ವೇ ನಿಲ್ಧಾಣದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿಭಾಗದ […]

ಬಿ.ಎಲ್.ಡಿ.ಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ A+ ಮಾನ್ಯತೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ (NAAC) 2023-2028ರ ಅವಧಿಗೆ A+ ಗ್ರೇಡ್ (3.28 ಅಂಕ) ಮಾನ್ಯತೆ ನೀಡಿದೆ.  ಕಳೆದ ವರ್ಷ ಡಿಸೆಂಬರ್ 7 ಮತ್ತು 8 ರಂದು ಕಾಲೇಜಿಗೆ ಭೇಟಿ ನೀಡಿದ್ದನ್ಯಾಕ್ ಕಮಿಟಿ, ಮಹಾವಿದ್ಯಾಲಯದಲ್ಲಿರುವ ಸೌಲಭ್ಯಗಳು, ಶೈಕ್ಷಣಿಕ ಗುಣಮಟ್ಟ, ಸಂಶೋಧನಾ ಪ್ರಗತಿ, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಉದ್ಯೋಗಾವಕಾಶ, ಸಾಮಾಜಿಕ ಸಮನ್ವತೆಯನ್ನು ಕೂಲಕಂಷವಾಗಿ ಪರಿಶಿಲಿಸಿ […]

ಸೈಕಲ್ ಮೇಲೆ ಪ್ರಧಾನಿ ಮೋದಿ ಸಾಧನೆಗಳ ಪ್ರಚಾರ: ವಿದ್ಯಾಕಾಶಿಯಿಂದ ಬಸವನಾಡಿಗೆ ಬಂದ ಯುವಕನಿಗೆ ಸ್ವಾಗತಿಸಿ ಗೌರವಿಸಿದ ಉಮೇಶ ಕಾರಜೋಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಕುರಿತು ಸೈಕಲ್ ಮೇಲೆ ಸಂಚರಿಸುತ್ತ ಪ್ರಚಾರ ಮಾಡುತ್ತಿರುವ ಧಾರವಾಡದ ಭರತ ಜೈನ್ ವಿಜಯಪುರ ನಗರಕ್ಕೆ ಆಗಮಿಸಿದ್ದು, ಅವರನ್ನು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಸೈಕಲ್ ಮೇಲೆ ಹಳ್ಳಿಗಳಿಗೆ ತೆರಳು ಪ್ರಚಾರ ಮಾಡುತ್ತಿರುವ ಭರತ ಜೈನ ಧಾರವಾಡ ಜಿಲ್ಲೆಯ ಮಂಟೂರ ಗ್ರಾಮದವರಾಗಿದ್ದು, ವೃತ್ತಿಯಲ್ಲಿ ಅಟೋ ಚಾಲಕರಾಗಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಅವರು ಸ್ವಯಂ ಪ್ರೇರಣೆಯಿಂದ […]