ಭೋವಿ ಸಮಾಜದಿಂದ ನಿರ್ಮಿಸಲಾದ ಶ್ರೀ ಗಜಾನನ ದೇವಸ್ಥಾನ ಉದ್ಘಾಟಿಸಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ

ವಿಜಯಪುರ: ನಗರದ ಸ್ಟೇಶನ್ ರಸ್ತೆಯ ಭೋವಿ(ವಡ್ಡರ) ಸಮಾಜದವರಿಂದ ನಿರ್ಮಿಸಲಾದ ಶ್ರೀ ಗಜಾನನ ನೂತನ ದೇವಸ್ಥಾನವನ್ನು ಸಮಾಜದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಿದರು. ಇದೇ ವೇಳೆ, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಅವರು ದೇವಸ್ಥಾನದ ಕಳಸಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ದಿನೇಶ ಹಳ್ಳಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ, ಮಾಜಿ ಕಾರ್ಪೋರೇಟರ್ ಉಮೇಶ ವಂದಾಲ, ನ್ಯಾಯವಾದಿ ಕೆ. ಎಫ್. ಅಂಕಲಗಿ, ಮುಖಂಡರಾದ ಬಸವರಾಜ ಗೊಳಸಂಗಿ, ಪ್ರಶಾಂತ ಲಾಳಸಂಗಿ, […]

ಕಾಖಂಡಕಿಯಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಧಾನದ ನವೀಕರಣವಾದ ಬೆಳ್ಳಿ ಕಂಬಿಯ ಲೋಕಾರ್ಪಣೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿಯ ಗ್ರಾಮದಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನವೀಕರಣಗೊಂಡಿರುವ ಬೆಳ್ಳಿಯ ಕಂಬಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ, 20 ನೆಯ ವರ್ಷದ ಶ್ರೀಶೈಲ ಪಾದಯಾತ್ರೆ ಅಂಗವಾಗಿ ಸುಕ್ಷೇತ್ರ ಗುಡ್ಡಾಪುರ ದಾನಮ್ಮದೇವಿಯ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಕೂಡ ನಡೆಯಲಿದೆ.  ಈ ಪ್ರವಚನ ಕಾರ್ಯಕ್ರಮದಲ್ಲಿ ಗುಣದಾಳದ ಕಲ್ಯಾಣ ಮಠದ ಡಾ. ವಿವೇಕಾನಂದ ದೇವರು ಮತ್ತು ಸಂಗೀತ ಸೇವೆ ಕೂಡ ಆಯೋಜಿಸಲಾಗಿದೆ. ಫೆ. 28ರಂದು ಗ್ರಾಮದ ಹೊರವಲಯದಲ್ಲಿರುವ ಪರಮಹಂಸ ಪೂರ್ವ ಪ್ರಾಥಮಿಕ ಶಾಲೆ […]