ಭೋವಿ ಸಮಾಜದಿಂದ ನಿರ್ಮಿಸಲಾದ ಶ್ರೀ ಗಜಾನನ ದೇವಸ್ಥಾನ ಉದ್ಘಾಟಿಸಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ

ವಿಜಯಪುರ: ನಗರದ ಸ್ಟೇಶನ್ ರಸ್ತೆಯ ಭೋವಿ(ವಡ್ಡರ) ಸಮಾಜದವರಿಂದ ನಿರ್ಮಿಸಲಾದ ಶ್ರೀ ಗಜಾನನ ನೂತನ ದೇವಸ್ಥಾನವನ್ನು ಸಮಾಜದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಿದರು.

ಇದೇ ವೇಳೆ, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಅವರು ದೇವಸ್ಥಾನದ ಕಳಸಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಮೇಯರ್ ದಿನೇಶ ಹಳ್ಳಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ, ಮಾಜಿ ಕಾರ್ಪೋರೇಟರ್ ಉಮೇಶ ವಂದಾಲ, ನ್ಯಾಯವಾದಿ ಕೆ. ಎಫ್. ಅಂಕಲಗಿ, ಮುಖಂಡರಾದ ಬಸವರಾಜ ಗೊಳಸಂಗಿ, ಪ್ರಶಾಂತ ಲಾಳಸಂಗಿ, ಪ್ರಕಾಶ ನಾಯಕೋಡಿ, ರಾಜು ಚಂದು ಕಾಳೆ, ಸೇರಿದಂತೆ ನಾನಾ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಗಪ್ಪ ಗುಜ್ಜಲಕರ ಪ್ರಾಸ್ತಾವಿಕವಾಗಿ ಮಾತನಾಡಿದರು.  ಸಮಾಜದ ಅಧ್ಯಕ್ಷ ಈರಪ್ಪ ಇರಕಲ ಸ್ವಾಗತಿಸಿದರು.

Leave a Reply

ಹೊಸ ಪೋಸ್ಟ್‌