ಪ್ರೊ. ರಾಜು ಆಲಗೂರ ಸೇರಿ ರಾಜ್ಯದ ಏಳು ಜನರಿಗೆ ಲೋಕಸಭೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ವಿಜಯಪುರ: ಮಾಜಿ ಶಾಸಕ ಪ್ರೊ. ರಾಜು ಆಲಗೂರ ಸೇರಿದಂತೆ ಏಳು ಜನ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಒಟ್ಟು 28 ಕ್ಷೇತ್ರಗಳನ್ನು ಕರ್ನಾಟಕ ಹೊಂದಿದ್ದು, ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಎಂ. ಎಂ, ಎಂ. ಫಿಲ್ ಪದವೀಧರರಾಗಿರುವ ಪ್ರೊ. ರಾಜು ಆಲಗೂರ ಅವರು, ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.  ಅಲ್ಲದೇ, ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.  1999 ಬಳ್ಳೊಳ್ಳಿ ಮತ್ತು 2013ರಲ್ಲಿ ನಾಗಠಾಣ ಮೀಸ,ಲು ಕ್ಷೇತ್ರಗಳಿಂದ ಅವರು […]

ಶಾಸಕ ಯತ್ನಾಳ ಆಗ್ರಹ- ನಾಸೀರ ಹುಸೇನ್ ಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು

ವಿಜಯಪುರ: ಪಾಕಿಸ್ತಾನ್ ಪರ ಘೋಷಣೆ ಪ್ರಕರಣದ ತನಿಖೆ ಮುಗಿಯುವವರೆಗೂ ರಾಜ್ಯಸಭೆ ನೂತನ ಸಂಸದ ನಾಶೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ವರೆಗೂ ಹೋಗಬಹುದು.  ಪಾಕಿಸ್ತಾನ ಪರ ಘೋಷಣೆ ಹಾಕಿದ ವ್ಯಕ್ತಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ಜೊತೆಗೂ ಬಾಂಧವ್ಯ ಹೊಂದಿದ್ದಾನೆ.  ಪಾಕಿಸ್ತಾನ ಪರ ಘೋಷಣೆ […]