Video News: ಟಿಕೆಟ್ ಸಿಕ್ಕಿದ್ದು ಖುಷಿ ತಂದಿದೆ- ನನ್ನನ್ನು ವಿರೋಧಿಸಿದವರಿಗೂ ದೇವರು ಒಳ್ಳೆಯದನ್ನು ಮಾಡಲಿ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಹೈಕಮಾಂಡ್ ನನಗೆ ಮತ್ತೆ ಬಿಜೆಪಿ ಟಿಕೆಟ್ ನೀಡಿರುವುದು ಖುಷಿ ತಂದಿದೆ.  ನನ್ನನ್ನು ವಿರೋಧಿಸಿದವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ರಾಷ್ಟ್ರೀಯ ನಾಯಕರು ಟಿಕೆಟ್ ಘೋಷಣೆ ಮಾಡಿದ್ದಾರೆ.  ಇದೆಲ್ಲದರ ಕ್ರೆಡಿಟ್ ಬಿಜೆಪಿ ಕಾರ್ಯಕರ್ತರಿಗೆ ಸಲ್ಲುತ್ತದೆ.  ಇದರಲ್ಲಿ ನನ್ನದೇನೂ ಪಾತ್ರವಿಲ್ಲ.  ಪಕ್ಷ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ.  ಇಲ್ಲದಿದ್ದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ನಾನು ಮುಂಚೆಯಿಂದಲೂ ಎಲ್ಲರಿಗೂ ಹೇಳುತ್ತ ಬಂದಿದ್ದೇನೆ.  ಹೀಗಾಗಿ ಇದೆಲ್ಲ ಕ್ರೆಡಿಟ್ ನನ್ನ ಪಕ್ಷದ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಹೇಳಿದರು.

ಸಂಸದ ರಮೇಶ ಜಿಗಜಿಣಗಿ ಅವರ ವಿಡಿಯೋ ಬೈಟ್:

ಕೆಲವರು ಅನೇಕ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹ ಎಬ್ಬಿಸಿದರೂ ಟಿಕೆಟ್ ನೀಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಅಪಪ್ರಚಾರಗಳನ್ನು ಮೀರಿ ಪಕ್ಷದ ನಾಯಕರು ನನಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.  ಅದು ನನಗೆ ಹೆಚ್ಚು ಖುಷಿ ತಂದಿದೆ ಎಂದು ರಮೇಶ ಜಿಗಜಿಣಗಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌