ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ: ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ನಾವು ಮುಂದಾಗಬೇಕು ಎಂದು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ನೀರಿನ ಮಟ್ಟ ಕುಸಿದಿದ್ದು ರೈತರು ನೀರಿನ ಅಭಾವದಿಂದ ಲಿಂಬೆ ಬೆಳೆಗಳನ್ನು ರಕ್ಷಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಈ ಭಾಗದ ರೈತರ ಜಮೀನುಗಳಿಗೆ ಖುದ್ದಾಗಿ ಭೇಟಿ […]

ಇಬ್ಬರು ವೈದ್ಯರು, ಓರ್ವ ಎಂಜಿನಿಯರ್ ಸೇರಿ ಮೂವರಿಗೆ ಕೇಂದ್ರ ಸರಕಾರದ ಪೇಟೆಂಟ್- ಯಾವುದಕ್ಕೆ ಗೊತ್ತಾ?

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಇಬ್ಬರು ವೈದ್ಯರು ಹಾಗೂ ಓರ್ವ ಎಂಜಿನೀಯರ್ ನಡೆಸಿದ ಸಂಶೋಧನೆಗೆ ಕೇಂದ್ರ ಸರಕಾರದಿಂದ ಪೇಟೆಂಟ್ ದೊರೆತಿದೆ. ಆಸ್ಪತ್ರೆಯ ಜಿಲ್ಲಾ ವಿಕಲಚೇತನ ಮತ್ತು ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಮತ್ತು ಅಂಗರಚನಾ ಶಾಸ್ತç ವಿಭಾಗದ ಡಾ. ಈಶ್ವರ ಬ. ಬಾಗೋಜಿ, ಎಂಜಿನೀಯರ್ ಕೆ. ಸಿ. ಮೊಹಂತಿ ಹಾಗೂ ಎಲಬು ಮತ್ತು ಕೀಲು ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಿರೀಶ ಖೋದ್ನಾಪೂರ […]

ಬಸವ ನಾಡಿನಲ್ಲಿ ತೆನೆ ಇಳಿಸಿ ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು- ರಾಜು ಆಲಗೂರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಮರುಸೇರ್ಪಡೆ

ವಿಜಯಪುರ: ನಾಗಠಾಣ ಮತಕ್ಷೇತ್ರದ ಜೆಡಿಎಸ್ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ತಮ್ಮ ಬೆಂಗಲಿಗರೊಂದಿಗೆ ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ.  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರ ಸಮ್ಮುಖದಲ್ಲಿ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿರುವುದರಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭೆ […]

ಕನಾನ್ ಮುಶ್ರಿಫ್ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ- ಸಂತಸ ವ್ಯಕ್ತಪಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕನಾನ್ ಅಬ್ಬುದ್ ಹಮೀದ್ ಮುಶ್ರಿಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಅವರ ಹಿರಿಯ ಪುತ್ರನಾಗಿರುವ ಕನಾನ್ ಪದವೀಧರರಾಗಿದ್ದು, ತಂದೆಯ ಜೊತೆ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದಾರೆ.  ಅಬ್ದುಲ್ ಹಮೀದ್ ಮುಶ್ರಿಫ್ 2018 ಮತ್ತು 2023ರಲ್ಲಿ ವಿಜಯಪುರ ನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು.  ಈಗ ಅವರ ಪುತ್ರನಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ […]