ಬಸವ ನಾಡಿನಲ್ಲಿ ತೆನೆ ಇಳಿಸಿ ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು- ರಾಜು ಆಲಗೂರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಮರುಸೇರ್ಪಡೆ

ವಿಜಯಪುರ: ನಾಗಠಾಣ ಮತಕ್ಷೇತ್ರದ ಜೆಡಿಎಸ್ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ತಮ್ಮ ಬೆಂಗಲಿಗರೊಂದಿಗೆ ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ. 

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರ ಸಮ್ಮುಖದಲ್ಲಿ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿರುವುದರಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭೆ ಮತಕ್ಷೇತ್ರದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಜೆಡಿಎಸ್ ಮುಖಂಡ ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ವಿಜಯಪುರದಲ್ಲಿ ಪ್ರೊ. ರಾಜು ಆಲಗೂರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾದರು.

ದೇಸು ಗೇಮು ಚವ್ಹಾಣ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಗ್ರಾ. ಪಂ. ಸದಸ್ಯರಾದ ರಾಚು ಚವ್ಹಾಣ, ಅಪ್ಪು ಹೀರು ಪವಾರ, ದುಂಡು ದೇನು ಜಾಧವ, ಭಾವಸಿಂಗ ಜಾಧವ, ಸಂತೋಷ ಜಾಧವ, ರಾಜು ಜಾಧವ, ಧೋಂಡು ದೇನು ಜಾಧವ, ಸುರೇಶ ಡಿ. ಚವ್ಹಾಣ, ಸೇವು ತುಳಜು ನಾಯಕ, ಮಾನು ಕಾರಬಾರಿ, ಹೂನು ಚವ್ಹಾಣ, ಎಂ.ಎಂ. ಮುಲ್ಲಾ(ದ್ಯಾಬೇರಿ), ಪಾಂಡು ರಾಠೋಡ, ಧರ್ಮು ರಾಠೋಡ, ಎಂ. ವೈ. ಹಲಗಣಿ ಅವರೊಂದಿಗೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದೇನೆ.  ಇನ್ನು ಮುಂದೆ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಇಬ್ಬರು ಸಚಿವರುಗಳ ಹಾಗೂ ಶಾಸಕರ‘ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಾ. ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀರಾಸಾಬ ಮುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಹಾಜಿಲಾಲ ದಳವಾಯಿ, ಕೃಷ್ಣಾ ಲಮಾಣಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌