ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಎಸ್. ಗವಿಮಠ ನೇಮಕ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಸನ್ನಿ ಎಸ್. ಗವಿಮಠ(ತ್ರಿಲೋಚನ) ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ. ಸನ್ನಿ ಎಸ್. ಗವಿಮಠ ಮೂಲತಃ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗನಾಗಿದ್ದಾನೆ.  ಆದರೆ, ಕಳೆದ ವರ್ಷ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು […]

ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯಿಂದ ಮಾ. 24 ರಿಂದ ಏ. 7ರ ವರೆಗೆ ಶ್ರೀಶೈಲವರೆಗೆ ಪಾದಯಾತ್ರೆ

ವಿಜಯಪುರ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶ್ರೀಶೈಲ ಮಲ್ಲಯನ ದರ್ಶನಕ್ಕೆ ಪಾದಯಾತ್ರೆ ಪ್ರಾರಂಭಿಸಿದ ಖ್ಯಾತಿಯ ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯ ಕಾರ್ಯಕ್ರಮ ಮಾ. 24 ರಿಂದ ಏ. 7ರ ವರೆಗೆ ನಡೆಯಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಮಿತಿಯ ಮುಖಂಡ ರವೀಂದ್ರ ಸಿದ್ದಯ್ಯ ಕರ್ಪೂರಮಠ, 31ನೇ ವರ್ಷದ ಪಾದಯಾತ್ರೆ ಇದಾಗಿದ್ದು, ಹೋಳಿ ಹುಣ್ಣಿಮೆಯ ದಿನದಿಂದ ಯುಗಾದಿಯವರೆಗೆ 15 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಾ. 24 […]

Video News: ಪಿಎಸ್ಐ ಆಗಬೇಕೆಂದಿದ್ದೆ, ಊರ ಗೌಡರು ರಾಜಕಾರಣಿ ಮಾಡಿದರು- ಓಟಿಎಸ್ ಸಾಲ ಪಡೆದ ರೈತರ ಪರ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ- ರಮೇಶ ಜಿಗಜಿಣಗಿ

ವಿಜಯಪುರ: ಡಿಗ್ರಿ ಮುಗಿಸಿದ ಮೇಲೆ ಪಿಎಸ್‌ಐ ಆಗಬೇಕೆಂದುಕೊಂಡಿದ್ದೆ.  ಆದರೆ, ಊರ ಗೌಡರ ಒತ್ತಾಯದ ಹಿನ್ನೆಲೆ ರಾಜಕೀಯ ಪ್ರವೇಶಿಸಿ ಆರು ಬಾರಿ ಸಂಸದನಾಗಿದ್ದೇನೆ ಎಂದು ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಇಂಡಿ ಪಟ್ಟಣದಲ್ಲಿ ಬಿಜೆಪಿ ಚುನಾವಣೆ ನಿರ್ವಹಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಾನು ಬಿ.ಎ ಮುಗಿದ ಮೇಲೆ ಪಿಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸಲು ತೆರಳಿದ್ದೆ.  ಆಗ ಊರ ಗೌಡರು ನಮ್ಮೂರಿನ ದಲಿತ ವಿದ್ಯಾವಂತ ಯುವಕ ಪಿಎಸ್‌ಐ ಆದರೆ ಸಾಲದು.  ಜನಪ್ರತಿನಿಧಿಯಾಗಿ ಇನ್ನಷ್ಟು ಸೇವೆ […]