Video News: ಇದು ನನ್ನ ಲಾಸ್ಟ್ ಎಲೆಕ್ಷನ್- ಕನಿಷ್ಠ ಒಂದು ವೋಟ್ ಅಂತರದಿಂದಾದರೂ ಗೆಲ್ಲುತ್ತೇನೆ- ರಮೇಶ ಜಿಗಜಿಣಗಿ

ವಿಜಯಪುರ: ಇದು ನನ್ನ ಕೊನೆಯ ಚುನಾವಣೆ.  ಎಲ್ಲ ಪ್ರಚಾರ ಸಭೆಗಳಲ್ಲಿಯೂ ಹೇಳಿದ್ದೇನೆ.  ಕನಿಷ್ಠ ಒಂದು ಮತದ ಅಂತರದಿಂದಾದರೂ ಗೆಲ್ಲುತ್ತೇನೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚಾರ ಮಾಡುತ್ತಿದ್ದೇನೆ.  ನೀವು ಬರಬೇಡಿ, ನಾವು ಮತ ಹಾಕುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.  ಆದರೂ ಕೂಡ ಚುನಾವಣೆಗಾಗಿ ಜಿಲ್ಲೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದೇನೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ನಡೆಸುವ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ.  […]

ಲೋಕಸಭೆ ಚುನಾವಣೆ 2024: ಗ್ರಾಮೀಣ ಭಾಗದಲ್ಲಿ ಡಿಸಿ ಟಿ. ಭೂಬಾಲನ್ ಪ್ರವಾಸ- ವಿಕಲಚೇತನರು, 85 ವರ್ಷ ಮೇಲ್ಪಟ್ವರಿಗೆ ಮತದಾನ ಮಾಹಿತಿ

ವಿಜಯಪುರ: ಪ್ರಜಾಪ್ರಭುತ್ವದ ಸಂವಿಧಾನಿಕ  ಹಕ್ಕಾಗಿರುವ  ಮತದಾನದಿಂದ ಯಾವುದೇ ಮತದಾರರು ವಂಚಿತರಾಗಬಾರದೆನ್ನುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯಲ್ಲಿ 85ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಮನೆಯಲ್ಲಿಯೇ ಮತ ಚಲಾವಣೆ ಮಾಡುವ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯ ಮನಗೂಳಿ ಮತ್ತು ಯರನಾಳ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಈ ಕುರಿತು ಮಾಹಿತಿ ನೀಡಿದರು  ಅಲ್ಲದೇ, ಮತಗಟ್ಟೆಗೆ  ಬಂದು ಮತದಾನ ಮಾಡಲು ಅಶಕ್ತರಾಗಿರುವವರನ್ನು ಮತಗಟ್ಟೆಯ ಬಿಎಲ್‌ಓ ಗಳು  ಗುರುತಿಸಿ ಅರ್ಜಿ ನಮೂನೆ 12ಡಿ […]

ಪ್ರಸವಪೂರ್ವ ಲಿಂಗಪತ್ತೆ ಕಾನೂನು ಬಾಹಿರ: ಟಿ. ಭೂಬಾಲನ್

ವಿಜಯಪುರ: ಗಂಡು ಮತ್ತು ಹೆಣ್ಣಿನ  ನಡುವೆ ಸಮಾನ ಅನುಪಾತ ತರುವ ನಿಟ್ಟಿನಲ್ಲಿ ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾನೂನನ್ನು ಕಡ್ಡಾಯವಾಗಿ ಎಲ್ಲಾ ಸ್ವಾನಿಂಗ್ ಸೆಂಟರ್‌ಗಳು ಪಾಲಿಸತಕ್ಕದ್ದು, ಒಂದುವೇಳೆ ಕಾನೂನು ಬಾಹಿರವಾಗಿ ನಡೆದುಕೊಂಡಲ್ಲಿ ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ.  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಿಸಿ, ಪಿಎನ್‌ಡಿಟಿಯು ಜಿಲ್ಲಾ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣ ಸಮಿತಿಯ ತುರ್ತುಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಕ್ಯಾನಿಂಗ್ […]