ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ಆಯೋಗದ ನಿಯಮಾನುಸಾರ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.  ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ  ಕಚೇರಿಯಲ್ಲಿ  ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ  ಮಾತನಾಡಿದ ಅವರು, ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಚೆಕ್‌ಪೋಸ್ಟಗಳಲ್ಲಿ […]

ಮಹಿಳೆಯರು ಕಾಂಗ್ರೆಸ್ಸಿಗೆ ದೊಡ್ಡ ಶಕ್ತಿಯಾಗಿದ್ದಾರೆ- ಪ್ರೊ. ರಾಜು ಆಲಗೂರ

ವಿಜಯಪುರ: ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಹಿಳೆಯರಿಗೆ ನೂರಾರು ಯೋಜನೆಗಳನ್ನು ಹಾಕಿಕೊಂಡಿದೆ.  ಅವರ ಅಭಿವೃದ್ಧಿಗೆ ಶ್ರಮಿಸಿದೆ.  ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ದಾಖಲೆಯಾಗಿದೆ.  ಇದೆಲ್ಲವನ್ನು ಪಕ್ಷದ ನಾಯಕರು […]