ಎಲೆಕ್ಟ್ರಾಲ್ ಬಾಂಡ್ ಖರೀದಿದಾರರ ಹೆಸರು ಬಹಿರಂಗವಾದ ಬಳಿಕ ಬಿಜೆಪಿ ಮುಖವಾಡ ಕಳಚಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ, ಮಾ. 31: ಎಲೆಕ್ಟ್ರಾಲ್ ಬಾಂಡ್ ವಿಚಾರ ಬಹಿರಂಗವಾದ ಬಳಿಕ ಮೋದಿ ಅವರ ಮುಖವಾಡ ಕಳಚಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ರವಿವಾರ ಬಬಲೇಶ್ವರದಲ್ಲಿ ವಿ. ಎಸ್. ಪಾಟೀಲ ಅವರ ತೋಟದಲ್ಲಿ ನಡೆದ ಬಬಲೇಶ್ವರ ಪಟ್ಟಣ, ಸಾರವಾಡ ಮತ್ತು ಮಮದಾಪುರ ಜಿ. ಪಂ. ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ […]

ಸಮಾಜದ ಎಲ್ಲ ವರ್ಗವದರ ಬಗ್ಗೆ ಗೌರವ ಭಾವನೆಯೊಂದಿಗೆ ರಾಜಕೀಯದಲ್ಲಿದ್ದೇನೆ- ಸಂಸದ ಜಿಗಜಿಣಗಿ

ವಿಜಯಪುರ: ಸಮಾಜದ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬಡವರು, ದಲಿತರು ಮೇಲ್ವರ್ಗದವರು ಸೇರಿದಂತೆ ಎಲ್ಲರ ಬಗ್ಗೆ ಗೌರವ ಭಾವನೆ ಹೊಂದಿದರೆ ರಾಜಕಾರಣ ಮಾಡಲು ಸಾಧ್ಯ ಎಂಬುದನ್ನು ಅರಿಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.  ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಅವರು, ರಾಜಕಾರಣ ಮಾಡಲು ಕಾರ್ಯಕರ್ತರು ಬೇಕು.  ಅವರು ಇಲ್ಲದಿದ್ದರೆ ನಾವು ಸೊನ್ನೆ ಇದ್ದಂತೆ.  ಅವರಿಂದ ಬಹಳಷ್ಟು ಕಲಿತಿದ್ದೇನೆ ಎಂದು ಹೇಳಿದರು. ಬೂತ್‌ ಗಳಲ್ಲಿರುವಷ್ಟು ಶಕ್ತಿ ಎಲ್ಲಿಯೂ ಇಲ್ಲ.  ಎಲ್ಲಾ […]

ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 1000ಕ್ಕೂ ಹೆಚ್ಚು ಬಾಳೆಗಿಡಗಳು- ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಕಂಗಾಲಾದ ರೈತ

ವಿಜಯಪುರ: ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನಾಶವಾದ ಘಟನೆ ವಿಜಯಪುರ ತಾಲೂಕಿನ ಬೊಮ್ಮನಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮುರುಗೆಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಇಡೀ ಬಾಳೆ ತೋಟ ಹಾಳಾಗಿದೆ.  ಮುರುಗೆಪ್ಪ ಚೌಗುಲಾ ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ಬಾಳೆ ಗಿಡಗಳನ್ನು ಬೆಳೆದಿದ್ದರು.  ಫಸಲು ಕೂಡ ಉತ್ತಮವಾಗಿತ್ತು.  ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿತ್ತು.   ಆದರೆ, ಶನಿವಾರ ಸಂಜೆ ಬೀಸಿದ […]

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ ವಿಕಾಸ ಕಿಶೋರ ವರ್ಗಾವಣೆ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರನ್ನಾಗಿ 2012ರ ಐಎಎಸ್‌ ಬ್ಯಾಚ್ ನ ಅಧಿಕಾರಿ ಸುರಳ್ಕರ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ ವಿಕಾಸ ಕಿಶೋರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರಳ್ಕರ ವಿಕಾಸ ಕಿಶೋರ  ಅವರನ್ನು ಸರಕಾರ […]