ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪಾದಯಾತ್ರೆ ಮೂಲಕ ಮತಯಾಚನೆ

ವಿಜಯಪುರ: ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಗುಮ್ಮಟ ನಗರಿ ವಿಜಯಪುರದಲ್ಲಿ ಪಾದಯಾತ್ರೆ, ಮೂಲಕ ಬಿರುಸಿನ ಪ್ರಚಾರ ನಡೆಸಿದರು.  ನಗರದ ವಾರ್ಡ್ ಸಂಖ್ಯೆ 32, 33 ಮತ್ತು 34ರಲ್ಲಿ ಪಾದಯಾತ್ರೆನಡೆಸಿದ ಅವರು, ನಗರದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.  ಈ ಸಲ ಮತದಾರರು ಬದಲಾವಣೆ ಬಯಸಿರುವುದು ನಿಚ್ಚಳವಾಗಿದೆ.  ರಾಜ್ಯದಲ್ಲಿ ಎಸ್. ಸಿದ್ದರಾಮಯ್ಯ ಅವರ ಸರಕಾರದ ಸಾಧನೆ ಮನೆ ಮತ್ತು ಮನ ಮುಟ್ಟಿದೆ.  ಜಿಲ್ಲೆಯೊಂದರಲ್ಲಿಯೇ […]

ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ- ರಾಜ್ಯ ಸರಕಾರ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ದುರ್ಬಳಕೆ ಮಾಡಿದೆ- ಮಹೇಂದ್ರಕುಮಾರ ನಾಯಿಕ

ವಿಜಯಪುರ: ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದ್ದೆ.  ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರಕುಮಾರ ನಾಯಿಕ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ. ಆರ್. ಅಂಬೇಡ್ಕರ ಅವರಿಂದ ಹಿಡಿದು ಈವರೆಗೆ ದಲಿತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಹಣವನ್ನು ಬೇರೆ ಯೋಜನೆಗೆ ಬಳಸಿಕೊಂಡಿದೆ.  ಈ ವಿಷಯದ ಕುರಿತು ಪ್ರಶ್ನಿಸಿದರೆ ಸಿದ್ದರಾಮಯ್ಯನವರು […]