ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ: ಪೊಲೀಸ್ ಸೇವೆ ಸ್ಮರಣೀಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ವ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ.  ನಿವೃತ್ತ ಪೊಲೀಸ್ ಸಿಬ್ಬಂದಿ […]