ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ: ಪೊಲೀಸ್ ಸೇವೆ ಸ್ಮರಣೀಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ವ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ.  ನಿವೃತ್ತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಗೌರವಿಸುವುದಸುವುದಕ್ಕಾಗಿಯೇ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಆಚರಿಸಲಾಗುತ್ತದೆ.  ನಿವೃತ್ತರಾದವರಿಗೆ ಸಮಸ್ಯೆಗಳೆನಾದರೂ ಇದ್ದಲ್ಲಿ ಜಿಲ್ಲಾಡಳಿತವನ್ನು ಸಂಪರ್ಕಿಸದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಸ್ತುತ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವದರೊಂದಿಗೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ವಿಜಯಪುರದಲ್ಲಿ ನಡೆದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಡಿಸಿ ಟಿ. ಭೂಬಾಲನ್ ಮಾತನಾಡಿದರು.

ಜಿ. ಪಂ. ಸಿಇಓ ರಿಶಿ ಆನಂದ ಮಾತನಾಡಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದೆ. ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದಲ್ಲಿ ಸಹಜವಾಗಿ ಜನಮನ್ನಣೆ ದೊರೆಯುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಎಸ್ಪಿ ಋಷಿಕೇಶ ಸೋನಾವಣೆ ಅವರು ಪೊಲೀಸ್ ಇಲಾಖೆಯ ನಾನಾ ಚಟುವಟಿಕೆಗಳ ವಾರ್ಷಿಕ ವರದಿ ವಾಚಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಡಿ ಗ್ರಾಮೀಣ ಠಾಣೆಯ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಜಿ. ಎಸ್. ಚಕ್ಕಡಿ ಅವರು ಕವಾಯತು ತಂಡಗಳ ಪರಿವೀಕ್ಷಣೆ ಹಾಗೂ ಗೌರವ ವಂದನೆ ಸ್ವೀಕರಿಸಿದರು.

 

ಪ್ರೊಬೇಷನರಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಆರು ತುಕಡಿಗಳ ಆಕರ್ಷಕ ಪಥಸಂಚಲನ ನಡೆಯಿತು.  ಡಿಸಿ, ಸಿಇಒ ಹಾಗೂ ಎಸ್‌ಪಿ ಅವರು ಪೊಲೀಸ್ ಧ್ವ್ವಜಗಳನ್ನು ಬಿಡುಗಡೆ ಮಾಡಿದರು.  2023ನೇ ವರ್ಷದಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.  ನಂತರ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಶಂಕರ ಕೆ. ಮಾರಿಹಾಳ ಸ್ವಾಗತಿಸಿದರು, ಪಿಎಸ್‌ಐ ಕೃಷ್ಣವೇಣಿ ಹಾಗೂ ಪೊಲೀಸ್ ಪೇದೆ ದಶರಥ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ರಾಮನಗೌಡ ಹಟ್ಟಿ ವಂದಿಸಿದರು.

Leave a Reply

ಹೊಸ ಪೋಸ್ಟ್‌