ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದ ಪ್ರೊ. ರಾಜು ಆಲಗೂರ

ಬೆಂಗಳೂರು: ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ. ಫಾರಂ ಪಡೆದರು. ಈ ಸಂದರ್ಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರಫುಲ್ ಮಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಲು ನನ್ನನ್ನು ಮತ್ತೊಮ್ಮೆ ಆಶೀರ್ವದಿಸಿ: ರಮೇಶ ಜಿಗಜಿಣಗಿ ಮನವಿ

ವಿಜಯಪುರ: ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ನನ್ನನ್ನು ಮತ್ತೋಮ್ಮೆ ಲೋಕಸಭೆ ಸದಸ್ಯನಾಗಿ ಮತ್ತೊಮ್ಮೆ ಆಶೀರ್ವದಿಸಿ ಅವಕಾಶ ನೀಡಬೇಕು ಎಂದು ವಿಜಯಪುರ ಎನ್‌ಡಿಎ ಅಭ್ಯರ್ಥಿ ಮತ್ತು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದ್ದಾರೆ. ದೇವರ ಹಿಪ್ಪರಗಿ ಕ್ಷೇತ್ರದ ಮುಳಸಾವಳಗಿ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜಿ. ಎಚ್. ಪಟೇಲ ಅವರ ಜೊತೆಗೂಡಿ ಹೆಜ್ಜೆ ಹಾಕಿ ರಾಜಕಾರಣ ಮಾಡಿದ್ದೇನೆ.  12 ಚುನಾವಣೆಗಳಲ್ಲಿ ಜನತೆ ನನ್ನನ್ನು ಆಶೀರ್ವದಿಸಿದ್ದಾರೆ.  ಅದೇ […]