ಕತಕನಹಳ್ಳಿ ಜಾನುವಾರು ಜಾತ್ರೆ ಪ್ರಾರಂಭ- ಶಾಸಕ ಸುನೀಲಗೌಡ ಪಾಟೀಲ ಚಾಲನೆ

ವಿಜಯಪುರ: ತಾಲೂಕಿನ ಸುಕ್ಷೇತ್ರ ಕತಕನಹಳ್ಳಿ ಶ್ರೀ ಗುರುಚಕ್ರವರ್ತಿ ಸದಾಶಿವ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಜಾನುವಾರು ಜಾತ್ರೆಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಚಾಲನೆ ನೀಡಿದರು.

ಮಠದ ಶ್ರೀ ಶಿವಯ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುನೀಲಗೌಡ ಪಾಟೀಲ ಜಾನುವಾರು ಜಾತ್ರೆ ಉದ್ಘಾಟಿಸಿದರು.  ಅಲ್ಲದೇ, ಗೋಮಾತೆಗೆ ಪೂಜೆ ಸಲ್ಲಿಸಿದರು.

ವಿಜಯಪುರ ತಾಲೂಕಿನ ಸುಕ್ಷೇತ್ರ ಕತಕನಹಳ್ಳಿಯಲ್ಲಿ ಶ್ರೀಗುರು ಚಕ್ರವ್ರತಿ ಸದಾಶಿವ ಶಿವಯೋಗಿಗಳ ಜಾತ್ರೆಯ ಅಂಗವಾಗಿ ನಡೆಯುತ್ತಿರುವ ಜಾನುವಾರು ಜಾತ್ರೆಗೆ ಚಾಲನೆ ನೀಡಿದ ಶಾಸಕ ಸುನೀಲಗೌಡ ಪಾಟೀಲ ಗೋಮಾತೆಗೆ ಪೂಜೆ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಉದ್ಯಮಿ ಬಾಬುಗೌಡ ಬಿರಾದಾರ, ಮುಖಂಡರಾದ ಬಸವರಾಜ ಕೌಲಗಿ, ಡಾ. ಗಂಗಾಧರ ಸಂಬಣ್ಣಿ, ಸಂಗಮೇಶ ಬಬಲೇಶ್ವರ, ಗೋಪಾಲ ಘಟಕಾಂಬಳೆ, ಈರಣ್ಣ ಪಟ್ಟಣಶೆಟ್ಟಿ, ನಾಗರಾಜ ಲಂಬು, ಅಪ್ಪಸಾಹೇಬ ಕೋಟ್ಯಾಳ, ಶರಣಪ್ಪ ಬಬಲೇಶ್ವರ, ಬಸನಗೌಡ ಬಿರಾದಾರ, ಪ್ರಕಾಶ ಪಾಟೀಲ(ಹತ್ತಳ್ಳಿ), ಅಶೋಕ ಪಾಟೀಲ, ರಾಜುಗೌಡ ಪಾಟೀಲ, ಪುಲಸಿಂಗ ಚವ್ಹಾಣ, ಕುಮಾರ ಮೋದಿ,  ಹೊನ್ನಪ್ಪ ಬಿಸನಾಳ, ಅರುಣ ಮಾಚಪ್ಪನವರ, ಗುರುನಾಥ ಗೋಟ್ಯಾಳ, ಕಲ್ಲುಗೌಡ ಪಾಟೀಲ, ಸಿದ್ದು ಮಲ್ಲಿಕಾರ್ಜುನಮಠ, ಮಠದ ಭಕ್ತರು ಹಾಗೂ ಸುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌