Video News: ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ- ಸಂಸದ ರಮೇಶ ಜಿಗಜಿಣಗಿ ವಿರುದ್ಧ ವಾಗ್ದಾಳಿ

ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೂಚಕರಾದ ಹೊಮನಲ್ಲ ಸಾರವಾಡ, ಬೀರಪ್ಪ ಜುಮನಾಳ, ಅಮೋಘಸಿದ್ಧ ಬಿಜ್ಜರಗಿ, ಸುರೇಶಗೌಡ ಪಾಟೀಲ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರೊ. ರಾಜು ಆಲಗೂರ, ರಾಜ್ಯ ಸರಕಾರದ ಕೆಲಸಗಳು ನಮ್ಮ ಕೈಹಿಡಿಯಲಿವೆ.  ಜನ ನಮ್ಮ ಮೇಲೆ […]