ಮೂರ್ನಾಲ್ಕು ದಿಗಳಿಗೊಮ್ಮೆಯಾದರೂ ವಿಜಯಪುರ ನಗರಕ್ಕೆ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ವಿಜಯಪುರ ನಗರಕ್ಕೆ ಕನಿಷ್ಠ ಮೂರ್ನಾಲ್ಕು ದಿನಗಳಿಗೊಮ್ಮೆಯಾದರೂ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಧ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದ್ಯಾಗೂ ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಸದ್ಭಳಕೆಯೊಂದಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ನಗರದಲ್ಲಿರುವ […]

ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ಸಧೃಡ ಭಾರತ ನಿರ್ಮಾಣಕ್ಕಾಗಿ, ಸಶಕ್ತ ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ .ಭೂಬಾಲನ್ ಹೇಳಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಮಾತನಾಡಿದರು. ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ […]