ಲೋಕಸಭೆ ಚುನಾವಣೆ: ವಿಜಯಪುರದಲ್ಲಿ ಅಂತಿಮವಾಗಿ ಎಂಟು ಜನ ಕಣದಲ್ಲಿ

ವಿಜಯಪುರ: ಲೋಕಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟು 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದು, ಅಂತಿಮವಾಗಿ ಕಣದಲ್ಲಿ ಎಂಟು ಅಭ್ಯರ್ಥಿಗಳು ಇದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.

ಕಣದಲ್ಲಿರುವ ಅಭ್ಯರ್ಥಿಗಳು

1. ಬಿಜೆಪಿ- ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ,

2. ಕಾಂಗ್ರೇಸ್‌- ರಾಜು ಆಲಗೂರ,

3. ಕಾರ್ನಾಟಕ ರಾಷ್ಟ್ರಸಮಿತಿ ಪಕ್ಷ- ಗಣಪತಿ ಲಾಲಸಿಂಗ ರಾಠೋಡ

4. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಪಕ್ಷ- ಜಿತೇಂದ್ರ ಅಶೋಕ ಕಾಂಬಳೆ

5. ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷ- ನಾಗಜ್ಯೋತಿ. ಬಿ. ಎನ್,

6. ರಾಷ್ಟಿçಯ ಸಮಾಜ ಪಕ್ಷ- ರಾಜಕುಮಾರ ಅಪ್ಪಣ್ಣಾ ಹೋನ್ನಕಟ್ಟಿ

7. ನಕಿ ಭಾರತೀಯ ಏಕತಾ ಪಕ್ಷ- ರಾಮಜಿ ಹರಿಜನ

8. ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ

ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ.

Leave a Reply

ಹೊಸ ಪೋಸ್ಟ್‌