ಅಭ್ಯರ್ಥಿಗಳ ಚುನಾವಣೆ ವೆಚ್ಚಗಳ ಲೆಕ್ಕಪತ್ರ ತಪಾಸಣೆ ದಿನಾಂಕ‌ ನಿಗದಿ ಪಡಿಸಿದ ಟಿ. ಭೂಬಾಲನ

ವಿಜಯಪುರ: ಪರಿಶಿಷ್ಟ ಜಾತಿ ಮೀಸಲು ಲೋಕಸಭೆ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಲೆಕ್ಕಪತ್ರವನ್ನು ಜನಪ್ರತಿನಿಧಿಗಳ ಕಾಯ್ದೆ 1951 ರ ಕಲಂ 77(1)ರ ಪ್ರಕಾರ ವೆಚ್ಚ ವೀಕ್ಷಕರು ತಪಾಸಣೆ ನಡೆಸಲಿದ್ದಾರೆ. ಏಪ್ರೀಲ್ 26ರಂದು ಮೊದಲ ಮತ್ತು‌‌ ಮೇ 1ರಂದು 2ನೇ ಹಾಗೂ ಮೇ 5 ರಂದು ಬೆಳಿಗ್ಗೆ 11 ಗಂಟೆಯಿಂದ 3ನೇ ತಪಾಸಣೆ ಮಾಡಲಾಗುತ್ತಿದೆ. ಈ ನಿಗದಿತ ದಿನಗಳಂದು ಅಭ್ಯರ್ಥಿಗಳು ತಮ್ಮ ಚುನಾವಣೆ ಏಜೆಂಟರುಗಳ ಮೂಲಕ ಬಿಳಿ ಬಣ್ಣದ ದೈನಂದಿನ ಖರ್ಚು ವೆಚ್ಚಗಳ ಪುಸ್ತಕ ಭಾಗ-ಎ, ಗುಲಾಬಿ ಬಣ್ಣದ ನಗದು […]

ಸಿಂದಗಿ ಪಟ್ಟಣದಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ನಾಯಕರಿಂದ ಮತಬೇಟೆ- ಪ್ರೊ. ರಾಜು ಆಲಗೂರ ಪರ ಮತಯಾಚನೆ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಸಾಮೂಹಿಕವಾಗಿ ಪ್ರಚಾರ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ಸಚಿವರು, ಶಾಸಕರು ಮತ್ತು ನಾಯಕರು ಮೂರನೇ ದಿನ ಸಿಂದಗಿ ಪಟ್ಟಣದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಿದರು. ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ. […]