ಭಾರತ ಬಲಿಷ್ಠಾವಾಗಿರಬೇಕಾದರೆ ಸಮುದಾಯ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ- ಡಾ. ವೈ. ಎಂ. ಜಯರಾಜ

ವಿಜಯಪುರ: ಭಾರತ ಬಲಿಷ್ಠವಾಗಿರಬೇಕಾದರೆ ಸಮುದಾಯ ಆರೋಗ್ಯ ಪಾತ್ರ ಬಹುಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.

ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜು, ರಾಜೀವ ಗಾಂಧಿ ವಿಶ್ವವಿದ್ಯಾಲಯ, ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಸೊಸೈಟಿ ಕಮ್ಯೂನಿಟಿ ನರ್ಸಿಂಗ್ ಆಫ್ ಇಂಡಿಯಾ ಸಹಯೋಗದಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಪ್ರಾರಂಭವಾದ ಸಮುದಾಯ ಆರೋಗ್ಯ ಶುಶ್ರೂಷಾ ಶಿಕ್ಷಣ ಕೌಶಲ್ಯ ಮತ್ತು ಸಂಶೋಧನೆಯಲ್ಲಿ ಕ್ರಾಂತಿ ಮತ್ತು ಹೊಸ ದೃಷ್ಠಿಕೋನ ಕುರಿತು ಎರಡು ದಿನಗಳ ಆಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದಲ್ಲಿ ರೋಗಗಳಿಗೆ ಪರಿಣಾಮಕಾರಿ ಮತ್ತು ಕಾಳಜಿಯಿಪೂರಕ ಚಿಕಿತ್ಸೆ ಸಿಗಲಿ ಎಂಬ ಉದ್ದೇಶದಿಂದ ದೇವರ ಶುಶ್ರೂಷಕರನ್ನು ಸೃಷ್ಠಿಸಿದ್ದಾರೆ. ಸಮುದಾಯದಲ್ಲಿ ಆರೋಗ್ಯ ಸುಧಾರಣೆಯಿಂದ ದೇಶದ ಆರೋಗ್ಯ ಸುಧಾರಣೆ ಸಾಧ್ಯವಿದೆ. ದೇಶದಲ್ಲಿ ಪ್ರತಿಯೊಬ್ಬರು ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ ಸದೃಢರಾದಾಗ ಮಾತ್ರ ಭಾರತ ಬಲಿಷ್ಠವಾಗಲಿದೆ. ಇದರಲ್ಲಿ ಸಮುದಾಯ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ನಡೆದ ಸಮುದಾಯ ಆರೋಗ್ಯ ಶುಶ್ರೂಷಾ ಶಿಕ್ಷಣ ಕೌಶಲ್ಯ ಮತ್ತು ಸಂಶೋಧನೆಯಲ್ಲಿ ಕ್ರಾಂತಿ ಮತ್ತು ಹೊಸ ದೃಷ್ಠಿಕೋನ ಕುರಿತು ಎರಡು ದಿನಗಳ ಆಂತಾರಾಷ್ಟ್ರೀಯ ಸಮ್ಮೇಳನವನ್ನು ಡಾ. ವೈ. ಎಂ. ಜಯರಾಜ ಮಾತನಾಡಿದರು.

ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಸೋಮಶೇಖರ ಕಲ್ಮಠ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ವಿಭಾಗಗಳಲ್ಲಿ ಶುಶ್ರೂಷಕರು ಅಗತ್ಯವಾಗಲಿದ್ದಾರೆ. ಶುಶ್ರೂಷಕರು ಇಲ್ಲದೇ ಆರೋಗ್ಯ ಕ್ಷೇತ್ರ ಇರಲಾರದು. ಬಸವ ನಾಡಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸುವ ಮೂಲಕ ಬಿ. ಎಲ್. ಡಿ. ಇ ಸಂಸ್ಥೆ ಮಹತ್ವದ ಈ ಭಾಗದ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಸೊಸೈಟಿ ಕಮ್ಯುನಿಟಿ ನರ್ಸಿಂಗ್ ಆಫ್ ಇಂಡಿಯಾ ಅಧ್ಯಕ್ಷ ಡಾ. ಚೆಲರಾನಿ ವಿಜಯಕುಮಾರ ಮಾತನಾಡಿ, ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಸಮ್ಮೇಳನಗಳು ಮಹಾನಗರಗಳಲ್ಲಿ ನಡೆಯುತ್ತವೆ. ಈ ಬಾರಿ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಅತ್ಯುತ್ತಮವಾಗಿ ಸಮ್ಮೇಳನ ಆಯೋಜಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಶುಶ್ರೂಷಕರಿಗೆ ಸಂಬಂಧಿಸಿದ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿ ಎಂದು ಶುಭ ಹಾರೈಸಿದರು.

ಕರ್ನಾಟಕ ಡಿಪ್ಲೊಮಾ ನರ್ಸಿಂಗ ಬೋರ್ಡ ಕಾರ್ಯದರ್ಶಿ ಮಡಿವಾಳಪ್ಪ ನಾಗರಳ್ಳಿ ಮಾತನಾಡಿ, ಸಮುದಾಯದಲ್ಲಿ ಶುಶ್ರೂಷಕರ ಪಾತ್ರ ಬಹುಮುಖ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಮುದಾಯ ಶುಶ್ರೂಷಕರಿಗೆ ಎಲ್ಲ ರೀತಿಯ ಅಧಿಕಾರ ನೀಡಿದರೆ ಆರೋಗ್ಯ ಸುಧಾರಣೆ ಮತ್ತಷ್ಟು ಉತ್ತಮವಾಗಿರಲಿದೆ ಎಂದು ಹೇಳಿದರು.

ಬಿ. ಎಲ್. ಡಿ. ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್‌. ಬಿ. ಕೊಟ್ನಾಳ ಮಾತನಾಡಿ, ಸಂಸ್ಥೆ ವಿದ್ಯಾರ್ಥಿಗಳು ಮತ್ತು ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಕಾಲಕಾಲಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆಯಾ ಕ್ಷೇತ್ರಗಳ ಬದಲಾವಣೆಗಳ ಕುರಿತು ಶಿಕ್ಷಣ ಮತ್ತು ತರಬೇತಿ ನೀಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಆನಂದ ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಸೊಸೈಟಿ ಕಮ್ಯುನಿಟಿ ನರ್ಸಿಂಗ್ ಆಫ್ ಇಂಡಿಯಾ ಕಾರ್ಯದರ್ಶಿ ಡಾ. ಶಾಂಡ್ರೆಲ್ಲಾ ಇಮ್ಯಾನುಯೆಲ್ ಮಾತನಾಡಿದರು.

ಈ ಸಂದರ್ಭದಲ್ಲಿ ಗುರುರಾಜ. ಗುಗ್ಗರಿ, ಡಾ. ಜಯಶ್ರೀ ಪೂಜಾರಿ, ಡಾ. ಬಶೀರಅಹ್ಮದ, ಡಾ. ಕವಿತಾ, ಸೌಜನ್ಯಾ ಪೂಜಾರಿ, ಅಮರನಾಥ ಸನ್ಮುಕೆ, ಬಾಪು ಖೊದ್ನಾಪೂರ‌, ಪ್ರವೀಣ ಬಗಲಿ ಮುಂತಾದವರು ಉಪಸ್ಥಿತರಿದ್ದರು.

ನರ್ಸಿಂಗ್ ಕಾಲೇಜಿನ ಉಪಪ್ರಾಚಾರ್ಯೆ ಉಪಪ್ರಾಚಾರ್ಯೆ ಡಾ. ಸುಚಿತ್ರಾ ರಾಠಿ ಸ್ವಾಗತಿಸಿದರು. ಪ್ರಾಚಾರ್ಯ ಡಾ. ಶಾಲ್ಮೊನ ಚೊಪಡೆ ಪರಿಚಯಿಸಿದರು.

ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ 800ಕ್ಕಿಂತ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Leave a Reply

ಹೊಸ ಪೋಸ್ಟ್‌