ಏ. 29 ರಂದು ಬಾಗಲಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ- ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ ಪರ ಮತಾಯನೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದು, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಪತ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಬೆ. 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಉಭಯ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಶಕ್ತಿ ತುಂಬಲಿದ್ದಾರೆ.  ಈ ಸಭೆಯಲ್ಲಿ ಉಭಯ ಜಿಲ್ಲೆಗಳ ಬಿಜೆಪಿ‌ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಮತ್ತು ಪಿ. ಸಿ. ಗದ್ದಿಗೌಡರ ಸೇರಿದಂತೆ ಬಿಜೆಪಿಯ ಮತ್ತು ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಎಲ್ಲೆಡೆ ಚುನಾವಣಾ ಕಾವು ಜೋರಾಗಿದ್ದು, ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನರಿಂದ ಬಿಜೆಪಿ ಪರ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ.  ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ.  ಈ ಸಭೆಗೆ ವಿಜಯಪುರ ಜಿಲ್ಲೆಯಿಂದ ಸುಮಾರು 25 ರಿಂದ 30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.  ಜಿಲ್ಲೆ ಎಲ್ಲಾ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರು, ಮೋದಿಯವರ ಹಿತೈಸಿಗಳು ಅಭಿಮಾನಿಗಳು ಅತಿ‌ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆರ್. ಎಸ್. ಪಾಟೀಲ ಕೂಚಬಾಳ ಮನವಿ ಮಾಡಿದರು.

ಈ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಂಜಯ ಪಾಟೀಲ ಕನಮಡಿ, ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರ, ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌