ರಕ್ತಬಸಿದು ಪಕ್ಷ ಕಟ್ಟಿದ್ದೇನೆ ಆದರೆ ನನ್ನನ್ನು ಡಿಸಿಎಂ ಸ್ಥಾನ ಕಿತ್ತುಕೊಂಡರು ಬಿಜೆಪಿ ವಿರುದ್ಧ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ

ವಿಜಯಪುರ: ರಕ್ತಬಸಿದು ಪಕ್ಷ ಕಟ್ಟಿದ್ದೇನೆ.  ಆದರೆ, ನನ್ನ ಡಿಸಿಎಂ ಸ್ಥಾನ ಕಿತ್ತುಕೊಂಡರು ಎಂದು ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಲಕ್ಷ್ಣಣ ಸವದಿಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂಬ ಆರೋಪದ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅಂಥದ್ದೇನೂ ಇಲ್ಲ.  ನಾನು ಬಿಜೆಪಿ ಸೇರಿದಾಗ ಅಥಣಿ ಮತ್ತು ‌ಕಾಗವಾಡ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಹಿಡಿದು ಎಲ್ಲಿಯೂ ಬಿಜೆಪಿಯ ಜನಪ್ರತಿನಿಧಿ‌ ಇರಲಿಲ್ಲ.  ನಾನು ರಕ್ತಬಸಿದು […]