ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ

ವಿಜಯಪುರ: ವಿಜಯಪುರ ಲೋಕಸಭೆ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬಿಜೆಪಿ‌‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ವಿಜಯಪುರ ನಗರದ ಡೋಹರ ಗಲ್ಲಿ‌ ಹಾಗೂ ಅಗಸರ ಗಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಅವರು ಬಿಜೆಪಿ ಪರ ಮತಯಾಚಿಸಿದರು.  ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅತ್ಯುತ್ಸಾಹದಲ್ಲಿ […]

ಯಾರಿಗಾದರೂ ತೊಂದರೆ ಕೊಟ್ಟಿದ್ದನ್ನು ಸಾಬೀತು ಮಾಡಿದರೆ ಚುನಾವಣೆ ಕಣದಿಂದ ನಿವೃತ್ತಿ- ಸಂಸದರಿಗೆ ಪ್ರೊ. ರಾಜು ಆಲಗೂರ ಸವಾಲು

ವಿಜಯಪುರ: ಪ್ರೊ. ರಾಜು ಆಲಗೂರ ವಿಜೇತರಾದರೆ ಲಿಂಗಾಯಿತ ಸಮುದಾಯಕ್ಕೆ ತೊಂದರೆಯಾಗಲಿದೆ ಎಂದು ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನೀಡಿರುವ ಹೇಳಿಕೆಗೆ  ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೇಳಿಕೆ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕೀಳು ಮಟ್ಟದ ರಾಜಕಾರಣ ಆರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಈವರೆಗೂ ಯಾರಿಗೂ ಏಕವಚನದಲ್ಲಿ ಮಾತನಾಡಿಲ್ಲ.ನಾನು ಲಿಂಗಾಯಿತ ಸಮುದಾಯದ ಜೊತೆಗೆ ಅನುಚಿತವಾಗಿ ನಡೆದುಕೊಂಡಿದ್ದನ್ನು ಬಿಜೆಪಿ ಅಭ್ಯರ್ಥಿ ರುಜುವಾತು […]