ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ- ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತಿರಬೇಕು- ಎಸ್. ಸಿದ್ಧರಾಮಯ್ಯ

ಬೆಂಗಳೂರು: ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್ ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ದಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. 10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ […]

ಕೊಡದಿಂದ 6000 ಲೀ. ಸಾಮರ್ಥ್ಯದ ಓಕುಳಿ ಹೊಂಡ ತುಂಬಿದ ಶ್ರೀ ಮಾರತೇಶ್ವರ ಭಕ್ತ ಚಂದನಗೌಡ ಶಿವಪ್ಪಗೌಡ ಕೊಡಗಾನೂರ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ದೇಶದಲ್ಲಿಯೇ ಅತೀ ಹೆಚ್ಚು ಮತ್ತು ವಿಶಿಷ್ಠ ಜಾತ್ರೆಗಳಿಗೆ ಹೆಸರುವಾಸಿ.  ಜಿಲ್ಲೆಯಲ್ಲಿ ವರ್ಷವಿಡೀ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು ನಡೆಯುತ್ತಲೇ ಇರುತ್ತವೆ.  ಈ ಜಾತ್ರೆಗಳಲ್ಲಿ ಭಕ್ತರು ತಮ್ಮಿಷ್ಠದ ಹರಕೆ ಹೊತ್ತು ಬಯಕೆ ಈಡೇರಿದ ಬಳಿಕ ಹರಕೆ ತೀರಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿರುತ್ತಾರೆ. ಈ ಸುದ್ದಿ ಕೂಡ ಅಂಥದ್ದೆ ಒಂದು ವಿಶೇಷತೆಯಿಂದ ಕೂಡಿದೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಬಿ.ಎಸ್ಸಿ ಓದುತ್ತಿರುವ ಯುವಕ ಚಂದನಗೌಡ ಶಿವಪ್ಪಗೌಡ ಕೊಡಗಾನೂರ ವಿನೂತನವಾಗಿ ದೇವರ […]