ಭೂಮಿ, ಆನಲೈನ್ ವಂಚನೆ, ಸುಲಿಗೆ ಸೇರಿ ನಾನಾ ಪ್ರಕರಣ ಬೇಧಿಸಿದ ಬಸವನಾಡಿನ ಪೊಲೀಸರು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ನಾನಾ ಠಾಣೆಗಳ ಪೊಲೀಸರು ಜಿಲ್ಲೆಯಲ್ಲಿ ದಾಖಲಾಗಿದ್ದ ಭೂ ಹಗರಣ, ಆನಲೈನ್ ವಂಚನೆ ಹಾಗೂ ದರೋಡೆ ಸೇರಿದಂತೆ ನಾನಾ ಪ್ರಕರಣಗಳನ್ನು ಭೇದಿಸುವ ಮೂಲಕ ಗಮನ ಸೆಳೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಮೊದಲ ಪ್ರಕರಣದಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ವಂಚಿಸಿ ಭೂ ಹಗರಣ ಮಾಡುತ್ತಿದವರನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಬಳಿ ಬಾಬಾನಗರ ಗ್ರಾಮದ ನಿವಾಸಿ ಸಾಹೇಬಗೌಡ ಮಲ್ಲನಗೌಡ […]