ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ‌ ಭೇಟಿ- ಮಂಜುನಾಥನ ದರ್ಶನ‌ ಪಡೆದ ಸಿದ್ಧರಾಮಯ್ಯ, ಶಿವಕುಮಾರ

ಮಂಗಳೂರು: ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕ. ಶಿವಕುಮಾರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು.

ಸಿಎಂ ಎಸ್. ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ‌ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಸ್ವಾಮೀಜಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

 

ಅಲ್ಲದೇ, ವಿಶೇಷ ಪೂಜೆ ಸಲ್ಲಿಸಿದ ಮುಖಂಡರು ದೇವರ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.

ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಸಿಎಂ, ಡಿಸುಎಂ ಮತ್ತು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ, ಕೆ. ವೆಂಕಟೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌