ತೊರವಿ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಎವಿಎಸ್ ಆಯುರ್ವೇದ್ ಕಾಲೇಜು ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ಶಿಬಿರ

ವಿಜಯಪುರ: ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ತೊರವಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಏಳು ದಿನಗಳ ಎನ್.ಎಸ್.ಎಸ್ ಶಿಬಿರದ ಅಂಗವಾಗಿ ಮಂಗಳವಾರ ಜಲ ಸಂರಕ್ಷಣೆ ಅಭಿಯಾನದ ಉದ್ಘಾಟನೆ ನಡೆಯಿತು. ಪರಿಸರ ತಜ್ಞ ಮತ್ತು ಹೈ ಲರ್ನ್ ಎಜ್ಯುಟೆಕ್ ಇನ್ಸ್ಟಿಟ್ಯೂಟ್ ನಿರ್ದೇಶಕರಾಗಿದ್ದರು. ಸಿರಾಜುದ್ದೀನ್ ಹೊರಗಿನಮನಿ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪರಿಸರ ಮತ್ತು ಜಲಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಕುರಿತು ಎನ್.ಎಸ್.ಎಸ್ ಶಿಬಿರಾರ್ಥಿಗಳು ಜನ […]

ಭೂಹಗರಣ ಸಿಓಡಿ ತನಿಖೆಗೆ ವಹಿಸಿ- ಸಚಿವ ಎಂ. ಬಿ. ಪಾಟೀಲ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಿ

ವಿಜಯಪುರ ಜಿಲ್ಲೆಯಲ್ಲಿ ನಡೆದಿರುವ ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪ್ಪು ಪಟ್ಟಣಶೆಟ್ಟಿ, ತಮ್ಮ ಬೇಡಿಕೆಗೆ ಸ್ಪಂದಿಸಿರುವ ಸಚಿವರು ತಾವೂ ಕೂಡ ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವರಿಗೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ತಾವು ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ […]