ವಿಶ್ವಖ್ಯಾತಿಯ ಬಿಜೆಎಂ ನಿಯತಕಾಲಿಕೆ ಸಹಸಂಪಾದಕರಾಗಿ ಡಾ. ಅರುಣ ಚಂ. ಇನಾಮದಾರ ಆಯ್ಕೆ

ವಿಜಯಪುರ: ಜಗತ್ತಿನ‌ ಖ್ಯಾತ ಬ್ರಿಟಿಷ ವೈದ್ಯಕೀಯ ಪ್ರಕಾಶನ ಸಂಸ್ಥೆಯ ಬಿ ಎಂ ಜೆ ಕೇಸ್ ರಿಪೋರ್ಟ ವೈದ್ಯಕೀಯ ವಿಜ್ಞಾನ ಮಾಸಿಕ ನಿಯತಕಾಲಿಕೆಯ ಅಸೋಸಿಯೇಟದ ಎಡಿಟರ್ ಅಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಆಯ್ಕೆ ಆಗಿದ್ದಾರೆ. ಚರ್ಮರೋಗ ಖ್ಯಾತ ತಜ್ಞವೈದ್ಯ ಡಾ. ಅರುಣ ಚಂ. ಇನಾಮದಾರ  ಈ ಮೂಲಕ ವಿಶ್ವದ ಪ್ರತಿಷ್ಠಿತ ನಿಯತಕಾಲಿಕೆಯ ಅಸೋಸಿಯೇಟ್ ಎಡಿಟರ್ ಆಗಿ ಆಯ್ಜೆಯಾದ ಭಾರತದ ಮೊದಲ‌ ಚರ್ಮರೋಗ ತಜ್ಞ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇಂದಿನಿಂದ ಅಂದರೆ ಜೂನ್ […]

ಸಂಸ್ಕೃತ, ವೈದಿಕ ಸಂಸ್ಕಾರ ಒಂದು ತಿಂಗಳ ಶಿಬಿರ ಮುಕ್ತಾಯ- ಸಮಾರೋಪ ಸಮಾರಂಭದಲ್ಲಿ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಭಾಗಿ

ವಿಜಯಪುರ: ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಮತ್ತು ಗುರುಪಾದಯ್ಯ ಶ್ರೀಶೈಲ ಗಚ್ಚಿನಮಠ ಇವರ ಸಹಯೋಗದೊಂದಿಗೆ ನಗರದ ಸಂಗನಬಸವ ಮಂಗಲ ಕಾರ್ಯಾಲಯದಲ್ಲಿಆಯೋಜಿಸಲಾಗಿದ್ದ ಸಂಸ್ಕೃತ ಮತ್ತು ವೈದಿಕ ಸಂಸ್ಕಾರ ಕುರಿತ ಒಂದು ತಿಂಗಳ ಶಿಬಿರ ಮುಕ್ತಾಯವಾಗಿದೆ. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ, ವೀರಶೈವ ಪರಂಪರೆಯಲ್ಲಿ ಆಚಾರ, ವಿಚಾರ, ವೈದಿಕತ್ವ ಸಂಸ್ಕಾರಗಳಂಥ ಶಿಬಿರಗಳನ್ನು ಆಯೋಜಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಇದೇ ವೇಳೆ ಗುರುಪಾದಯ್ಯ ಗಚ್ಚಿನಮಠ ಮತ್ತು ವಿಜಯಮಾಹಾಂತೇಶ್ವರಿ ಗುರುಪಾದಯ್ಯ ಗಚ್ಚಿನಮಠ ದಂಪತಿಯ 25ನೇ ವಿವಾಹ ವಾರ್ಷಿಕೋತ್ಸವ […]

ಭೂಅಕ್ರಮ ತನಿಖೆ ಸಿಓಡಿಗೆ ವಹಿಸಲು ಆಗ್ರಹ- ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಅಪ್ಪು ಪಟ್ಟಣಶೆಟ್ಟಿ

ಬೆಂಗಳೂರು: ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ನಕಲಿ ಭೂದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿರುವ ಭೂಮಾಫಿಯಾ ಮಟ್ಟ ಹಾಕಲು ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು, ಜಿಲ್ಲೆಯಲ್ಲಿ ಭೂ ಅಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘವಾಗಿ ಮಾಹಿತಿ ನೀಡಿದರು. ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಭೂದಾಖಲೆ ಸೃಷ್ಟಿಸಿ ಜಿಲ್ಲೆಯಲ್ಲಿ ಭೂಮಿ […]