ನೀಟ್ ಪ್ರವೇಶ ಪರಿಕ್ಷೇಯಲ್ಲಿ ಅವ್ಯವಹಾರ ಆರೋಪ- ನ್ಯಾಯಾಂಗ ತನಿಕೆಗೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕಿನಿಂದ ಅಂಬೇಡ್ಕರ್ ಚೌಕ್ ವರೆಗೆ ಜಾಥಾ ನಡೆಸಿದ ಕಾರ್ಯಕರ್ತರು, ಅಪರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ, ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜೀವನವನ್ನೇ ತೆಯ್ದು ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ […]